ಬೆಳ್ಳಾರೆ ಅಜಪಿಲ ದೇವಸ್ಥಾನಕ್ಕೆ ಭೂಮಿ ಖರೀದಿಗೆ ಧನ ಸಹಾಯ

0

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೂಮಿ ಖರೀದಿಗೆ ಚಂದ್ರಶೇಖರ ರೈ ಬೀಡು ಮತ್ತು ಮನೆಯವರು ರೂ.25,000 ಧನಸಹಾಯ ನೀಡಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತುರವರು ಧನ ಸಹಾಯ ಸ್ವೀಕರಿಸಿದರು.


ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕ ಉದಯ ಕುಮಾರ್ ಕೆ.ಟಿ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಸುನಿಲ್ ರೈ ಪುಡ್ಕಜೆ, ಬೆಳ್ಳಾರೆ ಲಕ್ಷ್ಮೀವೆಂಕಟ್ರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಲಕ್ಷ್ಮೀನಾರಾಯಣ ಶ್ಯಾನುಭಾಗ್, ಕೃಷ್ಣ ಪೈ ಮತ್ತಿತರರು ಉಪಸ್ಥಿತರಿದ್ದರು.