ಪೆರ್ಣೆ‌ ಮುಚ್ಚಿಲೋಟ್ ಕ್ಷೇತ್ರದಲ್ಲಿ ಕಳಿಯಾಟ ಮಹೋತ್ಸವ

0

ಪೆರ್ಣೆ ಶ್ರೀ ಮುಚ್ಚಿಲೋಟ್ ಭಗವತೀ ಕ್ಷೇತ್ರದಲ್ಲಿ ಕಳಿಯಾಟ ಮಹೋತ್ಸವ ಮಾ.1ರಿಂದ ಆರಂಭಗೊಂಡಿದ್ದು ಮಾ.7ರ ತನಕ ನಡೆಯುತ್ತದೆ.

ಮಾ.3ರಂದು ಸುಳ್ಯ ತಾಲೂಕಿನ ಪಾಟಾಳಿ ಯಾನೆ ಗಾಣಿಗ ಸಮಾಜ ಬಾಂಧವರು ಸುಳ್ಯದಿಂದ ಹಸಿರುವಾಣಿ ಮೆರವಣಿಗೆ ನಡೆಸಿದರು. ಬೆಳಗ್ಗೆ ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದರು. ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ದೇವಸ್ಥಾನದ ಮುಂಭಾಗದಲ್ಲಿ ನಿವೃತ್ತ ಶಿಕ್ಷಣಾಧಿಕಾರಿ ಶಂಕರಪಾಟಾಳಿಯವರು ತೆಂಗಿನಕಾಯಿ ಒಡೆದು ಮೆರವಣಿಗೆಗೆ ಚಾಲನೆ ನೀಡಿದರು.

ಪಾಟಾಳಿ ಯಾನೆ ಗಾಣಿಗ ಸಮಾಜದ ಅಧ್ಯಕ್ಷ ಚಂದ್ರಶೇಖರ ಉದ್ದಂತಡ್ಕ ಹಾಗೂ ಪದಾಧಿಕಾರಿಗಳು ಇದ್ದರು.

ಹಸಿರುವಾಣಿ ತುಂಬಿದ ವಾಹನಗಳು ಮೆರವಣಿಗೆಯಲ್ಲಿ ಸಾಗಿದವು.