ಅರಂತೋಡು : ಪಯಸ್ವಿನಿ ನದಿಯಿಂದ ಅಕ್ರಮ ಮರಳು ಸಾಗಾಟ,ಟಿಪ್ಪರ್ ಲಾರಿಯೊಂದಿಗೆ ಚಾಲಕನನ್ನು ಬಂಧಿಸಿದ ಸುಳ್ಯ ಪೊಲೀಸರು

0

ಅರಂತೋಡು ಪಯಸ್ವಿನಿ ನದಿಯಿಂದ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಮಾರ್ಚ್ 2 ರಂದು ರಾತ್ರಿ ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ಈರಯ್ಯ ದೂಂತೂರು ದಾಳಿ ನಡೆಸಿ ಟಿಪ್ಪರ್ ಲಾರಿ ಮತ್ತು ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಅಕ್ರಮ ಮರಳು ಗಣಿಗಾರಿಕೆಯನ್ನು ಸ್ಥಳೀಯ ನಿವಾಸಿ ತರುಣ್ ಎಂಬುವರು ಮಾಡುತ್ತಿದ್ದರು ಎನ್ನಲಾಗಿದ್ದು ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯ ನಂಬರ್ ಪ್ಲೇಟ್ ಅನ್ನು ಬಳಸದೆ ಈ ಕೃತ್ಯ ನಡೆಸುತ್ತಿದ್ದರು ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿ ಟಿಪ್ಪರ್ ಚಾಲಕ ಹಾಗೂ ಸಂಬಂಧಪಟ್ಟ ಇತರರ ಮೇಲೆ ಪ್ರಕರಣ ದಾಖಲಿಸಿಕೊಂಡು ಸುಳ್ಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.