ಮುರುಳ್ಯ ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

0

ಮುರುಳ್ಯ ಶಾಲೆಯಲ್ಲಿ ಎಸ್ ಡಿ ಎಂ ಸಿ ಮತ್ತು ಶಾಲೆಯ ಸಹಭಾಗಿತ್ವದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು. ಎಸ್ಡಿಎಂಸಿ ಅಧ್ಯಕ್ಷ ಅವಿನಾಶ್ ಡಿ. ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಣ್ಣಿನ ತಜ್ಞರಾದ ರಾಮಚಂದ್ರ ಇವರು ಕಣ್ಣಿನ ಪ್ರಾಮುಖ್ಯತೆ ಮತ್ತು ಶಿಬಿರದ ಬಗ್ಗೆ ಮಾಹಿತಿಯನ್ನು ನೀಡಿದರು. ಎಸ್ ಡಿ ಎಂ ಸಿ ಸದಸ್ಯರಾದ ಸವಿತಾ ಕರಂಬಿಲ, ಸ್ಕೌಟ್ ಗೈಡ್ ವಿದ್ಯಾರ್ಥಿಗಳು , ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸಿತರಿದ್ದರು.

ಸುಮಾರು ನೂರಕ್ಕೂ ಮೇಲ್ಪಟ್ಟು ಶಿಬಿರಾರ್ಥಿಗಳು ಕಣ್ಣಿನ ಉಚಿತ ತಪಾಸಣೆಯ ಪ್ರಯೋಜನವನ್ನು ಈ ಒಂದು ಗ್ರಾಮೀಣ ಪ್ರದೇಶದಲ್ಲಿ ಪಡೆದುಕೊಂಡರು . ಮುಖ್ಯಗುರುಗಳಾದ ಶಶಿಕಲಾ ರವರು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಶ್ರೀಮತಿ ನಳಿನಾಕ್ಷಿ ಇವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.