ಆಲೆಟ್ಟಿ ಬಿಜೆಪಿ ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳ ಮತ್ತು ಕಾರ್ಯಕರ್ತರ ಸಭೆ

0

ಆಲೆಟ್ಟಿ ಗ್ರಾಮದ ಭಾರತೀಯ ಜನತಾ ಪಕ್ಷದ ಶಕ್ತಿ ಕೇಂದ್ರದ ಪ್ರಮುಖರ ಹಾಗೂ ಪದಾಧಿಕಾರಿಗಳ ಮತ್ತು ಕಾರ್ಯಕರ್ತರ ಬೂತ್ ಸಬಲೀಕರಣ ಪೂರ್ವ ಭಾವಿ ಸಭೆಯು ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಮಾ.14 ರಂದು ನಡೆಯಿತು.

ಮಹಾಶಕ್ತಿ ಕೇಂದ್ರದ ಅಧ್ಯಕ್ಷೆ ಭಾರತಿ ಉಳುವಾರು ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ ರವರು ಬೂತ್ ವಾರು ಸಮಿತಿಯ ಅಧ್ಯಕ್ಷರಿಗೆ ಮತ್ತು ‌ಕಾರ್ಯಕರ್ತರಿಗೆ ಪಕ್ಷ ಸಂಘಟನೆಯ ಕುರಿತು ಹಾಗೂ ಮುಂದಿನ ಲೋಕಸಭಾ ಚುನಾವಣೆಯ ಪೂರ್ವ ತಯಾರಿಯ ಬಗ್ಗೆ ಸಲಹೆ ನೀಡಿದರು.


ಈ ಸಂದರ್ಭದಲ್ಲಿ ಆಲೆಟ್ಟಿ ಸೊಸೈಟಿ ಅಧ್ಯಕ್ಷ ಕರುಣಾಕರ ಹಾಸ್ಪಾರೆ, ಶಕ್ತಿ ಕೇಂದ್ರದ ಪ್ರಭಾರಿ ಜಯಪ್ರಕಾಶ್ ಕುಂಚಡ್ಕ, ಜಗದೀಶ್ ಸರಳಿಕುಂಜ, ಪ್ರಮುಖರಾದ ಶ್ರೀಪತಿ ಭಟ್ ಮಜಿಗುಂಡಿ, ಮಂಡಲ ಕಾರ್ಯದರ್ಶಿ ಶಂಕರ್ ಲಿಂಗಂ ತೊಡಿಕಾನ, ಪ್ರ. ಕಾರ್ಯದರ್ಶಿ ಸುದರ್ಶನ ಪಾತಿಕಲ್ಲು, ಯುವ ಮೋರ್ಚಾ ಪ್ರ.ಕಾರ್ಯದರ್ಶಿ ಪ್ರದೀಪ್ ಕೊಲ್ಲರಮೂಲೆ, ಎಸ್.ಸಿ.ಮೋರ್ಚಾ ಪ್ರ.ಕಾರ್ಯದರ್ಶಿ ಜಗನ್ನಾಥ ಜಯನಗರ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಸ್ಥಳೀಯ ಜನಪ್ರತಿನಿಧಿಗಳು, ಬೂತ್ ವಾರುಅಧ್ಯಕ್ಷರು,ಕಾರ್ಯದರ್ಶಿ ಹಾಗೂ ಸದಸ್ಯರು ಮತ್ತುಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು