ಎಡಮಂಗಲ ಗ್ರಾ.ಪಂ. ವಿಶೇಷ ಗ್ರಾಮಸಭೆ

0

ಎಡಮಂಗಲ ಗ್ರಾ.ಪಂ.ನ 2023-24ನೇ ಸಾಲಿನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಪ್ರಥಮ ಹಂತದ ಸಾಮಾಜಿಕ ಪರಿಶೋಧನಾ ವಿಶೇಷ ಗ್ರಾಮ ಸಭೆ ಮತ್ತು 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ವಿಶೇಷ ಗ್ರಾಮಸಭೆ ಮಾ. 6ರಂದು ಎಡಮಂಗಲ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು. ಕಡಬ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾದ ಚೆನ್ನಪ್ಪ ಗೌಡ ಕಜೆಮೂಲೆ ನೋಡೆಲ್ ಅಧಿಕಾರಿಯಾಗಿ ಭಾಗವಹಿಸಿದ್ದರು. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ತಾಲೂಕು ಸಂಯೋಜಕರಾದ ಚಂದ್ರಶೇಖರ್, ತೋಟಗಾರಿಕಾ ಅಧಿಕಾರಿ ಮಧುಶ್ರೀ ಮಾಹಿತಿ ನೀಡಿದರು. ಸಾಮಾಜಿಕ ಪರಿಶೋಧನಾ ಸಿಬ್ಬಂದಿಗಳು, ನರೇಗಾ ಫಲಾನುಭವಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಪಂಚಾಯತ್ ಅಧ್ಯಕ್ಷ ರಾಮಣ್ಣ ಜಾಲ್ತಾರು, ಉಪಾಧ್ಯಕ್ಷೆ ಶ್ರೀಮತಿ ದಿವ್ಯಾ ಎಂ.ಆರ್, ಸದಸ್ಯರಾದ ನಾಗೇಶ್ ಮರೋಳಿ, ಗೀತಾ ಬಿ, ರೇವತಿ ಎಂಜಿರು, ಮಾಯಿಲಪ್ಪ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಭವ್ಯ ಸ್ವಾಗತಿಸಿ, ವಂದಿಸಿದರು.