ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ವಿ.ಹಿಂ.ಪ. ನೇತೃತ್ವದಲ್ಲಿ ರಕ್ತದಾನ ಶಿಬಿರ

0

ವಿಶ್ವ ಹಿಂದೂ ಪರಿಷತ್‌ ಸುಳ್ಯ‌ ನಗರ, ಭಾರತೀಯ ವೈದ್ಯಕೀಯ ಸಂಘ ಸುಳ್ಯ ಶಾಖೆ, ತಾಲೂಕು ಆಸ್ಪತ್ರೆ ಸುಳ್ಯ, ಮತ್ತು ರಕ್ತ ನಿಧಿ ಘಟಕ ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ ಮಾ.24ರಂದು ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ನಡೆಯುತ್ತಿದ್ದು, ಶಿಬಿರದ ಉದ್ಘಾಟನೆ ಬೆಳಿಗ್ಗೆ ನೆರವೇರಿತು.

ಸುಳ್ಯ ತಾಲೂಕು ಆಸ್ಪತ್ರೆ ಆಡಳಿತಾಧಿಕಾರಿ ಡಾ.ಕರುಣಾಕರ ಕೆ.ವಿ. ಕಾರ್ಯಕ್ರಮ ಉದ್ಘಾಟಿಸಿದರು. ವಿಶ್ವ ಹಿಂದೂ ಪರಿಷತ್ ಸುಳ್ಯ ನಗರ ಅಧ್ಯಕ್ಷ ಉಪೇಂದ್ರ ನಾಯಕ್ ಸೂರ್ತಿಲ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಅಧ್ಯಕ್ಷ ಡಾ.ಕೃಷ್ಣ ಪ್ರಸನ್ನ, ಸುಳ್ಯ ಪ್ರಖಂಡ ಅಧ್ಯಕ್ಷ ಸೋಮಶೇಖರ ಪೈಕ, ಸುಳ್ಯ ಐಎಂಎ ಅಧ್ಯಕ್ಷೆ ಡಾ.ವೀಣಾ, ಮಂಗಳೂರು ವೆನ್ಲಾಕ್ ಆಸ್ಪತ್ರೆ ರಕ್ತನಿಧಿ ಘಟಕದ ಡಾ.ಶರತ್ ಕುಮಾರ್ ರಾವ್, ಬಜರಂಗದಳ ಸುಳ್ಯ ಪ್ರಖಂಡ ಸಂಚಾಲಕ ಹರಿಪ್ರಸಾದ್ ಎಲಿಮಲೆ ಭಾಗವಹಿಸಿದ್ದರು.
ಪ್ರಕಾಶ್ ಯಾದವ್ ಕಿಲಾರ್ಕಜೆಯವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.