ಪೆರುವಾಜೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ – ಗ್ರಾಮ, ಬೂತ್ ಸಮಿತಿ ರಚನೆ

0

ಪೆರುವಾಜೆ ಕಾಂಗ್ರೆಸ್ ಗ್ರಾಮ ಸಮಿತಿ ವತಿಯಿಂದ ಕಾರ್ಯಕರ್ತರ ಸಭೆ ಪೆರುವಾಜೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ ಸಿ ಜಯರಾಂರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸುಳ್ಯ ವಿಧಾನ ಸಭಾ ಕ್ಷೇತ್ರದ ವೀಕ್ಷಕರಾದ ಜಯಪ್ರಕಾಶ್ ರೈ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರಾಧಾಕೃಷ್ಣ ಬೊಳ್ಳುರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ರಾಜೀವಿ ರೈ, ಕೆಪಿಸಿಸಿ ಸದಸ್ಯರಾದ ಸರಸ್ವತಿ ಕಾಮತ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಜಗನ್ನಾಥ ಪೂಜಾರಿ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಅಬ್ದುಲ್ ಗಫೂರ್, ಪಂಚಾಯಿತಿ ಉಪಾಧ್ಯಕ್ಷೆ ಶಹನಾಜ್ ಅಬ್ದುಲ್ ರಹೀಂ,ಸದಸ್ಯರಾದ ಸಚಿನ್ ರಾಜ್ ಶೆಟ್ಟಿ, ಗುಲಾಬಿ ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಗ್ರಾಮ ಸಮಿತಿ, ಬೂತ್ ಸಮಿತಿ ಗಳಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು.


ಇತ್ತೀಚೆಗೆ ನಿಧನರಾದ ಹಿರಿಯ ಕಾಂಗ್ರೆಸಿಗರಾದ ಅದ್ರಾಮ ಮುಕ್ಕೂರು ಇವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಪೆರುವಾಜೆ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷ ರಾಗಿ ವೆಂಕಪ್ಪ ಗೌಡ ನಾರ್ಕೋಡು ಆಯ್ಕೆ ಯಾದರು, ಪ್ರಧಾನ ಕಾರ್ಯದರ್ಶಿ ಯಾಗಿ ಮಹಮ್ಮದ್ ಕಮಾಲ್
ಮುಕ್ಕೂರು ಬೂತ್ ಅಧ್ಯಕ್ಷ ರಾಗಿ ಜಗನ್ನಾಥ ಪೂಜಾರಿ, ಪೆರುವಾಜೆ ಬೂತ್ ಅಧ್ಯಕ್ಷ ರಾಗಿ ಇಬ್ರಾಹಿಂ ಅಂಬಟೆಗದ್ದೆ, ಮುರ್ಕೆತ್ತಿ ಬೂತ್ ಅಧ್ಯಕ್ಷ ರಾಗಿ ಲಕ್ಷ್ಮಣ ದುರ್ಗಾ ನಗರ ಆಯ್ಕೆ ಯಾದರು. ಸಚಿನ್ ರಾಜ್ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು.