ಕಾಂತಮಂಗಲ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸೋಲಾರ್ ಬೀದಿ ದೀಪದ ಕೊಡುಗೆ

0

ಸುಳ್ಯ ತಾಲೂಕು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ,ಉಡುಪಿ ಭಾರತೀಯ ಜೀವ ವಿಮಾ ನಿಗಮದ ವತಿಯಿಂದ ಕೊಡುಗೆಯಾಗಿ ವಿಮಾ ಗ್ರಾಮವನ್ನಾಗಿ ಅಜ್ಜಾವರ ಗ್ರಾಮವನ್ನು ಆಯ್ಕೆ ಮಾಡಿದ್ದು ಇದರ ವತಿಯಿಂದ ಕೊಡುಗೆಯಾಗಿ ಕಾಂತಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸೋಲಾರ್ ಬೀದಿ ದೀಪವನ್ನು ನೀಡಲಾಯಿತು.

ಈ ಸಂದರ್ಭ ಜನಜಾಗೃತಿ ವೇದಿಕೆಯ ಅಧ್ಯಕ್ಷ ಶಿವಪ್ರಕಾಶ್ ಅಡ್ಪಂಗಾಯ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಭಾಸ್ಕರ ಬಯಂಬು, ವಲಯ ಮೇಲ್ವಿಚಾರಕಿ ವಿಶಾಲ ಕೆ, ಆಡಳಿತ ಮಂಡಳಿಯ ಅಧ್ಯಕ್ಷ ರಾಧಾಕೃಷ್ಣ, ಸದಸ್ಯ ಪರಮೇಶ್ವರ ಮುಳ್ಯ, ಒಕ್ಕೂಟದ ಅಧ್ಯಕ್ಷ ರಮೇಶ್ ದೊಡ್ಡೇರಿ, ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷ ಸುಂದರ ನಾಯ್ಕ್ ಕಾಂತಮಂಗಲ, ಒಕ್ಕೂಟದ ಕಾರ್ಯದರ್ಶಿ ಸರಿತಾ, ಸೇವಾ ಪ್ರತಿನಿಧಿಗಳಾದ ಸೌಮ್ಯ ಮತ್ತು ಉಷಾ ಹಾಗೂ ದೇವಸ್ಥಾನದ ಅರ್ಚಕರು ಉಪಸ್ಥಿತರಿದ್ದರು.