ಇತಿಹಾಸ ಪ್ರಸಿದ್ಧ ಕಲ್ಲುಗುಂಡಿ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ

0

ಸಾವಿರಾರು ಮಂದಿ ಭಕ್ತಾದಿಗಳ ಸಮ್ಮುಖದಲ್ಲಿ ನಡೆದ ಶ್ರೀ ವಿಷ್ಣುಮೂರ್ತಿ ದೈವದ ಅಗ್ನಿಪ್ರವೇಶ

ದ.ಕ. ಸಂಪಾಜೆ ಗ್ರಾಮದ ಇತಿಹಾಸ ಪ್ರಸಿದ್ಧ ಕಲ್ಲುಗುಂಡಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.28 ಮತ್ತು 29ರಂದು ಜರುಗಿತು.

ಮಾ.27ರಂದು ಬೆಳಿಗ್ಗೆ ದೈವಸ್ಥಾನದ ಸನ್ನಿಧಿಯಲ್ಲಿ ಗಣಹೋಮ ನಡೆಯಿತು. ಮಾ.28ರಂದು ರಾತ್ರಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಿಂದ ಭಂಡಾರವನ್ನು ಒತ್ತೆಕೋಲ ಗದ್ದೆಗೆ ತಂದು, ಬಳಿಕ ಮೇಲೇರಿಗೆ ಅಗ್ನಿಸ್ಪರ್ಶ ಮಾಡಲಾಯಿತು.


ರಾತ್ರಿ ಶ್ರೀ ವಿಷ್ಣುಮೂರ್ತಿ ದೈವದ ಕುಳ್ಚಾಟ ನಡೆಯಿತು. ರಾತ್ರಿ ರಾಜ್ಯದ ಸರ್ವಶ್ರೇಷ್ಠ ಕಲಾವಿದರ ಕೂಡುವಿಕೆಯಿಂದ ಸುಳ್ಯದ ಎ ಟು ಝೆಡ್ ಈವೆಂಟ್ಸ್ ಎಂಡ್ ಮ್ಯಾನೇಜ್ಮೆಂಟ್ ಮುಂದಾಳತ್ವದಲ್ಲಿ ವಿನೂತನ ಕಾರ್ಯಕ್ರಮ ಕಲ್ಲುಗುಂಡಿ ಕಲರವ ಜರುಗಿತು.

ಮಾ.29ರಂದು ಬೆಳಿಗ್ಗೆ ಶ್ರೀ ಮಹಾವಿಷ್ಣುಮೂರ್ತಿ ದೈವದ ಅಗ್ನಿಪ್ರವೇಶ, ಪ್ರಸಾದ ವಿತರಣೆ, ನಡೆಯಿತು.

ಮಾ.30ರಂದು ನಾಳೆ ಮಧ್ಯಾಹ್ನ ಪಂಜುರ್ಲಿ ಹಾಗೂ ಕಲ್ಲುರ್ಟಿ ಮತ್ತು ಗುಳಿಗ ದೈವಗಳಿಗೆ ಸಮ್ಮಾನ ನಡೆಯಲಿದೆ.

ಈ ಸಂದರ್ಭದಲ್ಲಿ ಮಹಾವಿಷ್ಣು ದೈವಸ್ಥಾನದ ಅಧ್ಯಕ್ಷ ಕೆ.ಆರ್. ಜಗದೀಶ್ ರೈ, ದೈವಸ್ಥಾನದ ಪ್ರಧಾನ ಪೂಜಾರಿ ನಾರಾಯಣ ಬಾಲೆಂಬಿ, ಕಚೇರಿ ನಿರ್ವಾಹಕ ಬಿ. ಶಿವರಾಮ , ಗೌರವಾಧ್ಯಕ್ಷ ರಾಜಾರಾಂ ಕೀಲಾರು, ಮೊಕ್ತೇಸರ ಕೆ. ಕರುಣಾಕರ , ಕಾರ್ಯದರ್ಶಿ ಕೆ.ವಿ. ಮಂಜುನಾಥ್, ಕೋಶಾಧಿಕಾರಿ ಬಿ.ಆರ್. ಪದ್ಯಯ್ಯ, ಮಾಜಿ ಅಧ್ಯಕ್ಷ ಶ್ರೀಧರ ಮಾದೆಪಾಲು ಸೇರಿದಂತೆ ಆಡಳಿತ ಸಮಿತಿಯ ಪದಾಧಿಕಾರಿಗಳು ಹಾಗೂ ಸಾವಿರಾರು ಮಂದಿ ಭಕ್ತಾದಿಗಳು ಉಪಸ್ಥಿತರಿದ್ದರು.