ಎ.10,11 : ಅಮೈ – ಕೊಡಿಯಾಲಬೈಲು 45 ನೇ ವಾರ್ಷಿಕ ಶ್ರೀ ವಿಷ್ಣುಮೂರ್ತಿ ದೈವದ ಬೈಲುಕೋಲ

0

ಉಬರಡ್ಕ ಮಿತ್ತೂರು ಗ್ರಾಮದ ಅಮೈ ಕೊಡಿಯಾಲಬೈಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಕಾಲಂಪ್ರತಿ ನಡೆಯುವ ಶ್ರೀ ವಿಷ್ಣುಮೂರ್ತಿ ದೈವದ ಬೈಲುಕೋಲವು ಎ.10 ಮತ್ತು ಎ.11 ರಂದು ನಡೆಯಲಿದೆ.
ಎ.03 ರಂದು ಬೆಳಿಗ್ಗೆ ಗಂಟೆ 7.00 ಕ್ಕೆ ಗೊನೆ ಕಡಿಯಲಾಗುವುದು.
ಎ.06 ರಂದು ಬೆಳಿಗ್ಗೆ ಗಂಟೆ 9.30 ಕ್ಕೆ ಪ್ರತಿಷ್ಠಾ ವಾರ್ಷಿಕೋತ್ಸವದ ತಂಬಿಲ ಸೇವೆ ನಡೆಯಲಿದೆ.
ಎ.10 ರಂದು ಬೆಳಿಗ್ಗೆ ಗಂಟೆ 7.00 ಕ್ಕೆ ಗಣಪತಿ ಹವನ,ಸಂಜೆ ಗಂಟೆ 6.00 ಕ್ಕೆ ಊರವರ ಕೂಡುವಿಕೆ ರಾತ್ರಿ ಗಂಟೆ 9.30 ಕ್ಕೆ ಕುಲ್ಚಾಟ ನಡೆಯಲಿದೆ.


ಎ.11 ರಂದು ಪ್ರಾತ:ಕಾಲ ಗಂಟೆ 6.30 ಕ್ಕೆ ಶ್ರೀ ವಿಷ್ಣುಮೂರ್ತಿ ದೈವದ ಕೋಲ ನಂತರ ಪ್ರಸಾದ ವಿತರಣೆ ನಡೆಯಲಿದೆ.
ಎ.10 ರಂದು ರಾತ್ರಿ ಗಂಟೆ 7.00 ರಿಂದ 8.30 ರವರೆಗೆ ಶ್ರೀ ವಿಷ್ಣು ಯುವಕ ಮಂಡಲ ಅಮೈ ಕೊಡೊಯಾಲ ಬೈಲು ಮತ್ತು ಶ್ರೀ ವರಲಕ್ಷ್ಮೀ ಯುವತಿ ಮಂಡಲ ಅಮೈ ಕೊಡಿಯಾಲಬೈಲು ಇವರಿಂದ ಭಜನೆ ನಡೆಯಲಿದೆ.
ರಾತ್ರಿ 9.00 ರಿಂದ ಸಾರ್ವಜನಿಕ ಅನ್ನಪ್ರಸಾದ ವಿತರಣೆ ನಡೆಯಲಿದೆ.
ರಾತ್ರಿ ಗಂಟೆ 10.00 ರಿಂದ ಸಾಂಸ್ಕೃತಿಕ ಸಂಭ್ರಮ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಡಿಯಾಲಬೈಲು ಮತ್ತು ಅಂಗನವಾಡಿ ಕೇಂದ್ರ ಕೊಡಿಯಾಲಬೈಲು ಇವರಿಂದ ನಂತರ ಶ್ರೀ ಬೆಂಕಿನಾಥೇಶ್ವರ ಕೃಪಾ ಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಬಾಳ,ಕಳವಾರು ಮಂಗಳೂರು ಇವರಿಂದ ಉದಯಕುಮಾರ್ ವಿರಚಿತ ಸತ್ಯೊದ ಸ್ವಾಮಿ ಕೊರಗಜ್ಜ ತುಳು ಕಥಾನಕ ನಡೆಯಲಿದೆ.