ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಗೆ ರೋಟರಿ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ – ಸಾಧಕರಿಗೆ ಸನ್ಮಾನ

0

ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಗೆ ರೋಟರಿ ಜಿಲ್ಲಾ ಗವರ್ನರ್ ಎಚ್.ಆರ್. ಕೇಶವರವರು ಎ.02 ರಂದು ಭೇಟಿ ನೀಡಿದರು. ರಾತ್ರಿ ಬೆಳ್ಳಾರೆ ಅಮ್ಮು ರೈ ಕಾಂಪ್ಲೆಕ್ಸ್ ನ ದೇವಿ ಹೈಟ್ಸ್ ನಲ್ಲಿ ಸಭಾ ಕಾರ್ಯಕ್ರಮ ನಡೆಯಿತು.


ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಲಕ್ಷ್ಮೀನಾರಾಯಣ ಕಣಿಪಿಲ, ಬೆಳ್ಳಾರೆ ಗ್ರಾಮ ಪಂಚಾಯತ್ ಕಸ ವಿಲೇವಾರಿ ವಾಹನದ ಚಾಲಕರಾದ ಸವಿತ, ಕ್ರೀಡಾಪಟುಗಳಾದ ಕಿಶನ್ ದ್ರಾವಿಡ್,ಹೇಮಂತ್ ಕೆ.ವಿ.ಯವರನ್ನು ಶಾಲು ಹೊದಿಸಿ,ಫಲ ಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

ಸನ್ಮಾನ ಪತ್ರವನ್ನು ರೊ.ಕೇಶವಮೂರ್ತಿ,ರೊ.ಸತ್ಯನಾರಾಯಣ,ರೊ.ಮೋನಪ್ಪ ತಂಬಿನಮಕ್ಕಿಯವರು ವಾಚಿಸಿದರು. ವಿವಿಧ ಕೊಡುಗೆಗಳನ್ನು ನೀಡಿ ಸಹಕರಿಸಿದವರನ್ನು ಗೌರವಿಸಲಾಯಿತು.
ಜಿಲ್ಲಾ ಗವರ್ನರ್ ರೋಟರಿ ಬುಲೆಟಿನ್ ಬಿಡುಗಡೆಗೊಳಿಸಿದರು. ರೊ.ರವೀಂದ್ರ ಗೌಡರವರು ಜಿಲ್ಲಾ ಗವರ್ನರ್ ರವರ ಪರಿಚಯ ಮಾಡಿದರು.

ರೋಟರಿ ಕ್ಲಬ್ ಅಧ್ಯಕ್ಷ ರೊ.ಶಶಿಧರ ಬಿ.ಕೆ.ಸ್ವಾಗತಿಸಿ,ಪ್ರಾಸ್ತಾವಿಕ ಮಾತನಾಡಿದರು. ಕಾರ್ಯದರ್ಶಿ ವಿಶ್ವನಾಥ ಕೆ.ವರದಿ ಮಂಡಿಸಿದರು.

ವೇದಿಕೆಯಲ್ಲಿ ರೋಟರಿ ಜಿಲ್ಲಾ ಗವರ್ನರ್ ಎಚ್.ಆರ್.ಕೇಶವ್, ಅಸಿಸ್ಟೆಂಟ್ ಗವರ್ನರ್ ಪುರಂದರ ರೈ ಉಪಸ್ಥಿತರಿದ್ದು ಬೆಳ್ಳಾರೆ ರೋಟರಿ ಕ್ಲಬ್ ನ ಸಾಧನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಝೋನಲ್ ಲೆಫ್ಟಿನೆಂಟ್ ಪದ್ಮನಾಭ ಬೀಡು,ರೊ.ಎ.ಕೆ.ಮಣಿಯಾಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕು.ಜ್ಯೋತ್ಸ್ನಾ ಪ್ರಾರ್ಥಿಸಿ, ರೊ.ಪ್ರಭಾಕರ ಆಳ್ವ, ರೊ.ವಿನಯಕುಮಾರ್ ಕಾರ್ಯಕ್ರಮ ನಿರೂಪಿಸಿ,ರೋಟರಿ ನಿಯೋಜಿತ ಅಧ್ಯಕ್ಷ ಚಂದ್ರಶೇಖರ ರೈ ವಂದಿಸಿದರು. ಕಾರ್ಯಕ್ರಮದಲ್ಲಿ ಬೆಳ್ಳಾರೆ ರೋಟರಿ ಕ್ಲಬ್ ನ ಸದಸ್ಯರು ಹಾಗೂ ವಿವಿಧ ಕಡೆಯ ರೋಟರಿ ಕ್ಲಬ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.