ನವೋದಯ ಪರೀಕ್ಷೆ : ತನ್ಮಯ್ ಪಿ.ಎಂ. ಜಿಲ್ಲೆಗೆ ದ್ವಿತೀಯ

0

ನವೋದಯ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ತನ್ಮಯ್ ಪಿ.ಎಂ. ಅತ್ಯುತ್ತಮ ಶ್ರೇಣಿಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿದ್ದು, ಸುಳ್ಯ ತಾಲೂಕಿಗೆ ಪ್ರಥಮ ಸ್ಥಾನಿಯಾಗಿದ್ದಾರೆ.

ಪುತ್ತೂರು ತೆಂಕಿಲ ವಿವೇಕಾನಂದ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ವಿದ್ಯಾರ್ಥಿಯಾಗಿರುವ ಇವರು, ಸುಳ್ಯದ ವಲಯಾರಣ್ಯಾಧಿಕಾರಿ ಮಂಜುನಾಥ್ ಎನ್ ಹಾಗೂ ಸುಬ್ರಹ್ಮಣ್ಯ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಶ್ರುತಿ ಕೆ ದಂಪತಿಗಳ ಪುತ್ರ.

ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದಲ್ಲಿಯೂ ವಿದ್ಯಾಭ್ಯಾಸ ಪಡೆದಿದ್ದಾರೆ.