ಮರ್ಕಂಜ : ಕಾಂಗ್ರೆಸ್ ಗ್ರಾಮ ಸಮಿತಿಯ ಪೂರ್ವಭಾವಿ ಸಭೆ

0

ಮಂಗಳೂರು ಲೋಕಸಭಾ ಚುನಾವಣೆ, ಬ್ಲಾಕ್ ಕಾಂಗ್ರೆಸ್ ಸುಳ್ಯ ಇದರ ಗುತ್ತಿಗಾರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಮರ್ಕಂಜ ಗ್ರಾಮ ಸಮಿತಿಯ ಪೂರ್ವಭಾವಿ ಸಭೆ ಇಂದು ನಡೆಯಿತು.

ಸಭೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ. ಸಿ ಜಯರಾಂ , ಸುಳ್ಯ ವಿಧಾನಸಭಾ ಕ್ಷೇತ್ರದ ವೀಕ್ಷಕರಾದ ಎನ್ ಜಯಪ್ರಕಾಶ್ ರೈ, ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿಗಳಾದ ಎಂ. ವೆಂಕಪ್ಪ ಗೌಡ, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ , ಇಂಡಿಯಾ ಒಕ್ಕೂಟದ ಮೂಲಕ ಕಾಂಗ್ರೆಸ್ ಬೆಂಬಲಿಸುವ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯ ಅಶೋಕ್ ಎಡಮಲೆ, ಪ್ರಚಾರ ಸಮಿತಿ ಮಾಜಿ ಅಧ್ಯಕ್ಷ ರಾಜಾರಾಂ ಭಟ್ ಬೆಟ್ಟ, ಸುಳ್ಯ ವಿಧಾನಸಭಾ ಕ್ಷೇತ್ರದ ಸಾಮಾಜಿಕ ಜಾಲತಾಣ ಉಸ್ತುವಾರಿ ಚೇತನ್ ಕಜೆಗದ್ದೆ ಮತ್ತು ಮರ್ಕಂಜ ಗ್ರಾಮ ಸಮಿತಿ ಅಧ್ಯಕ್ಷರಾದ ಪುಷ್ಪರಾಜ್ ರೈ, ಗ್ರಾಮ ಸಮಿತಿ ಕಾರ್ಯದರ್ಶಿ ಕೊರಗಪ್ಪ, ವಾಸುದೇವ ಗೌಡ ಪುರ, ಅನಿಲ್ ಕುಮಾರ್ ಅಂಬೆಕಲ್ಲು, ಜಯರಾಮ ದೇಶಕೋಡಿ, ಯಶವಂತ ಸೂಟೆಗದ್ದೆ, ಜಗದೀಶ್ ಉಬ್ರಾಳ, ಮನಮೋಹನ್ ದೊಡ್ಡಿಹಿತ್ಲು, ಕೊರಗಪ್ಪ ಗೌಡ ಪಾರೆಮಜಲು, ವಿಶ್ವನಾಥ ರೈ ಮತ್ತಿತರ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.