ಗೌರಿತಾಳಿಗೆ ಕರ್ನಾಟಕ ಸೇವಾರತ್ನ ಪ್ರಶಸ್ತಿ

0

ಯೋಗ ಪಟು ಗೌರಿತಾಳಿಗೆ ಕರ್ನಾಟಕ ಸೇವಾ ರತ್ನಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಏ.7 ರಂದು ಪುತ್ತೂರಿನ ಸುದಾನ ವಸತಿ ಶಾಲೆಯ ಎಡ್ವರ್ಡ್ ಹಾಲ್ ನಲ್ಲಿ ನಡೆಯಿತು.

ರಾಸಾ ಕನ್ನಡ ಮತ್ತು ಕಲಾ ಸಂಸ್ಕೃತಿ ಚಾರಿಟೇಬಲ್ ಟ್ರಸ್ಟ್ ಹಾಗೂ ರಾಸಾ ಪಬ್ಲಿಕೇಷನ್ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಘಟಕ ಇದರ ಅಧ್ಯಕ್ಷ ಉಮೇಶ್ ನಾಯಕ್. ಧರ್ಮ ಗುರುಗಳು ಹಾಗೂ ಸಂಚಾಲಕರು ಸುದಾನ ವಿದ್ಯಾ ಸಂಸ್ಥೆ ಪುತ್ತೂರು ವಿಜಯ್ ಹಾರ್ವಿನ್, ಸಾಹಿತಿ ನಾರಾಯಣ ಕುಕ್ಕುವಳ್ಳಿ, ರಘುನಾಥ ಉಪಾಧ್ಯಾಯ, ರಾಸಾ ಟ್ರಸ್ಟಿ ಶ್ರೀಮತಿ ಹೇಮ, ಅಭಯ ಸಂಸ್ಥಾಪಕರು ಈಶ್ವರ ಮತ್ತಿತರರು ಉಪಸ್ಥಿತರಿದ್ದರು. ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ 3ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಇವಳು ಡಾ. ಗೌತಮ್ ಮತ್ತು ಡಾ. ರಾಜೇಶ್ವರಿ ರವರ ಪುತ್ರಿ .