ಆಲೆಟ್ಟಿ ಸದಾಶಿವ ದೇವಸ್ಥಾನದ ರಾಜಾಂಗಣ ಶಾಶ್ವತ ಚಪ್ಪರ ನಿರ್ಮಾಣಕ್ಕೆ ಗುದ್ದಲಿ ಪೂಜೆ

0

ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದ ರಾಜಾಂಗಣ ಕ್ಕೆ ಶಾಶ್ವತ ಚಪ್ಪರ ನಿರ್ಮಾಣಕ್ಕೆ ಗುದ್ದಲಿ ಪೂಜೆಯು ಇಂದು ಬೆಳಗ್ಗೆ ನೆರವೇರಿತು.

ದೇವಳದ ಪ್ರಧಾನ ಅರ್ಚಕ‌ ಹರ್ಷಿತ್ ಬನ್ನಿಂತಾಯ ರವರು ಪೂಜಾ ಕೈಂಕರ್ಯ ನೆರವೇರಿಸಿದರು. ಜೀ.ಸ.ಕಾರ್ಯದರ್ಶಿ ಕೃಪಾಶಂಕರ ತುದಿಯಡ್ಕ ಪ್ರಾರ್ಥಿಸಿದರು. ಅನುವಂಶಿಕ ಮೊಕ್ತೇಸರ ಹೇಮಚಂದ್ರ ಬೈಪಡಿತ್ತಾಯ ರವರು ತೆಂಗಿನ ಕಾಯಿ ಒಡೆದು ಕೆಲಸಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ತೀರ್ಥಕುಮಾರ್ ಕುಂಚಡ್ಕ, ಗುಂಡ್ಯ ಮಾಡಾರಮನೆ ಉಳ್ಳಾಕುಲು ದೈವಸ್ಥಾನದ ಅಧ್ಯಕ್ಷ ಅಶೋಕ ಪ್ರಭು ಸುಳ್ಯ, ವ್ಯ.ಸ.ಸದಸ್ಯರಾದ ಜಗದೀಶ್ ಸರಳಿಕುಂಜ, ಸತೀಶ್ ಕುಂಭಕೋಡು, ಹರಿಪ್ರಸಾದ್ ಗಬ್ಬಲ್ಕಜೆ,ಅಚ್ಚುತ ಮಣಿಯಾಣಿ ಆಲೆಟ್ಟಿ, ನಳಿನಿ ರೈ ಆಲೆಟ್ಟಿ , ಒತ್ತೆಕೋಲ ಸಮಿತಿ ಅಧ್ಯಕ್ಷ ಸುಧಾಕರ ಆಲೆಟ್ಟಿ, ವ್ಯ.ಸ.ಮಾಜಿ ಅಧ್ಯಕ್ಷ ಪ್ರಸನ್ನ ಕೆ‌.ಸಿ.ಬಡ್ಡಡ್ಕ, ರತ್ನಾಕರ ಗೌಡ ಕುಡೆಕಲ್ಲು, ಭಜನಾ ಸಂಘದ ಗೌರವಾಧ್ಯಕ್ಷ ಅಪ್ಪಯ್ಯ ಮಣಿಯಾಣಿ ಆಲೆಟ್ಟಿ, ಪಂಚಾಯತ್ ಅಧ್ಯಕ್ಷೆ ವೀಣಾ ಆಲೆಟ್ಟಿ, ಸದಸ್ಯ ಶಿವಾನಂದ ರಂಗತ್ತಮಲೆ, ಚಂದ್ರಕಾಂತ ನಾರ್ಕೋಡು,
ಮೊರಂಗಲ್ಲು ಮಹಮ್ಮಾಯಿ ದೇವಸ್ಥಾನದ ಮೊಕ್ತೇಸರ ಬೆಳ್ತ ಮೊರಂಗಲ್ಲು ಹಾಗೂ ದೇವಸ್ಥಾನದ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು, ಭಜನಾ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು, ಸ್ಥಳೀಯ ಭಕ್ತಾದಿಗಳು ಉಪಸ್ಥಿತರಿದ್ದರು. ಸೇ.ಸ.ಕಾರ್ಯದರ್ಶಿ ರಾಮಚಂದ್ರ ಆಲೆಟ್ಟಿ ಸ್ವಾಗತಿಸಿದರು. ಭ.ಸ.ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ ವಂದಿಸಿದರು.