ಬೆಟ್ಟಂಪಾಡಿ ಭಜನಾ ಮಂದಿರದಲ್ಲಿ ಉಚಿತ ಬೇಸಿಗೆ ಶಿಬಿರದ ಉದ್ಘಾಟನೆ

0

ಹಳೆಗೇಟುಶಿವಾಜಿ ಯುವ ವೃಂದ,ಬೆಟ್ಟಂಪಾಡಿ ಶ್ರೀ ಮಂಜುನಾಥೇಶ್ವರ ಭಜನಾ ಮಂದಿರ ಹಾಗೂ ಮಂಜುನಾಥೇಶ್ವರ ಭಜನಾ ಮಂಡಳಿ ಇದರ ಜಂಟಿ ಆಶ್ರಯದಲ್ಲಿ ಚಿಣ್ಣರ ಚಿತ್ತಾರ ಉಚಿತ ಬೇಸಿಗೆ ಶಿಬಿರವು ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ಎ.18 ರಂದು ಆರಂಭಗೊಂಡಿತು. ಭಜನಾ ಮಂದಿರದ ಅಧ್ಯಕ್ಷ ಅವಿನ್ ಬೆಟ್ಟಂಪಾಡಿ ದೀಪ ಬೆಳಗಿಸಿ ಶುಭ ಹಾರೈಸಿದರು.
ಸಂಪನ್ಮೂಲ ವ್ಯಕ್ತಿ ರಾಜ್ ಮುಖೇಶ್ ನೇತೃತ್ವದಲ್ಲಿ ಶಿಬಿರವನ್ನು ಆಯೋಜಿಸಲಾಯಿತು.
ವಿದ್ಯಾರ್ಥಿಗಳಿಗೆ ನೈತಿಕ ಮತ್ತು ಮೌಲ್ಯಾಧಾರಿತ ಶಿಕ್ಷಣದೊಂದಿಗೆ ಮನರಂಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶಿಬಿರದಲ್ಲಿ ಸುಮಾರು 70
ವಿದ್ಯಾರ್ಥಿಗಳು ಭಾಗವಹಿಸಿದರು.

ಎ. 18 ರಿಂದ 24 ರ ತನಕ ನಡೆಯಲಿರುವ ಶಿಬಿರದಲ್ಲಿ ಹಾಡು, ಅಭಿನಯ,ಕ್ರಾಫ್ಟ್, ಚಿತ್ರಕಲೆ ಮುಂತಾದ ತರಗತಿಗಳ ಜೊತೆ ಅಬಾಕಸ್ ಮತ್ತು ಮೋಜಿನ ವಿಜ್ಞಾನ ತರಗತಿಗಳು ನಡೆಯಲಿವೆ.
ಉದಯಭಾಸ್ಕರ್ ಕಾರ್ಯಕ್ರಮ ನಿರೂಪಿಸಿದರು.

ಎ. 24 ರಂದು ಸಮಾರೋಪ ಸಮಾರಂಭ ನಡೆಯಲಿದ್ದು ಅಂತರಾಷ್ಟ್ರೀಯ ಖ್ಯಾತಿಯ ಕುದ್ರೋಳಿ ಗಣೇಶ್ ರವರಿಂದ ಜಾದೂ ಪ್ರದರ್ಶನ ನಡೆಯಲಿರುವುದು. ಸಂಪನ್ಮೂಲ ವ್ಯಕ್ತಿಗಳಾಗಿ ಸರಸ್ವತಿ ಬೆಟ್ಟಂಪಾಡಿ, ಫ್ಯೂಶನ್ ಡ್ಯಾನ್ಸ್ ನ ವಸಂತ್ ಕಾಯರ್ತೋಡಿ ಮತ್ತು ಪೋಷಕರು ಉಪಸ್ಥಿತರಿದ್ದರು.