ತೊಡಿಕಾನ ಶ್ರೀ ಪಾಷಾಣಮೂರ್ತಿ ಅಮ್ಮನವರ ಸಮ್ಮಾನ

0

ಸಾವಿರಾರು ಸಂಖ್ಯೆಯಲ್ಲಿ ಊರ – ಪರವೂರ ಭಕ್ತಾದಿಗಳ ಉಪಸ್ಥಿತಿ

ಸುಳ್ಯಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಶ್ರೀ ಪಾಷಾಣಮೂರ್ತಿ ಅಮ್ಮನವರ ಸನ್ನಿಧಿಯಲ್ಲಿ ಶ್ರೀ ಪಾಷಾಣಮೂರ್ತಿ ಅಮ್ಮನವರ ಹರಕೆ ಸಮ್ಮಾನವು ಮೇ.14ರಂದು ಸಂಜೆ ಜರುಗಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರುಗಳು, ಮಾಜಿ ಸದಸ್ಯರುಗಳು, ದೇವಸ್ಥಾನದ ವ್ಯವಸ್ಥಾಪಕರು ಮತ್ತು ಸಿಬ್ಬಂದಿವರ್ಗದವರು, ಊರ – ಪರವೂರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹರಕೆ ಸಮ್ಮಾನದಲ್ಲಿ ಪಾಲ್ಗೊಂಡು ಶ್ರೀ ದೈವದ ಪ್ರಸಾದ ಸ್ವೀಕರಿಸಿದರು.