ಮೇನಾಲದಲ್ಲಿ ದಿ.ನವೀನ್ ರೈ ಮೇನಾಲ ಸ್ಮರಣಾರ್ಥ ರಕ್ತದಾನ ಶಿಬಿರ

0

ಶಾಸಕಿ‌ ಭಾಗೀರಥಿ ಮುರುಳ್ಯರಿಂದ ಚಾಲನೆ – ಸಂಸದರ ಉಪಸ್ಥಿತಿ

ಬಿಜೆಪಿ ಮುಖಂಡ, ಮಾಜಿ ಜಿ.ಪಂ. ಸದಸ್ಯ ದಿ.ನವೀನ್ ಕುಮಾರ್ ರೈ ಮೇನಾಲರು ನಿಧನರಾಗಿ ಒಂದು ವರ್ಷವಾದ ಹಿನ್ನಲೆಯಲ್ಲಿ ಸೇವಾಭಾರತಿ ಹೆಲ್ಪ್ ಲೈನ್ ಟ್ರಸ್ಟ್ ಸುಳ್ಯ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಶ್ರೀಕೃಷ್ಣ ಭಜನಾ ಮಂದಿರ ಮೇನಾಲ ಇದರ ಆಶ್ರಯದಲ್ಲಿ ಅವರ ನೆನಪಿಗಾಗಿ ರಕ್ತದಾನ ಶಿಬಿರ ಮೇ.18ರಂದು ಮೇನಾಲ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಶಾಸಕಿ ಭಾಗೀರಥಿ ಮುರುಳ್ಯರು ಮೊದಲಾಗಿ ರಕ್ತದಾನ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಭೆ : ಮೇನಾಲ ಶ್ರೀಕೃಷ್ಣ ಭಜನಾ ಮಂದಿರದಲ್ಲಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ಸೇವಾ ಭಾರತಿ ಹೆಲ್ಪ್ ಲೈನ್ ಟ್ರಸ್ಟ್ ಅಧ್ಯಕ್ಷ ಡಾ.ಮನೋಜ್ ಅಡ್ಡಂತಡ್ಕ ವಹಿಸಿದ್ದರು.

ಸಂಸದ ನಳಿನ್ ಕುಮಾರ್ ಕಟೀಲ್ ನವೀನ್ ರೈಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಶಾಸಕಿ ಭಾಗೀರಥಿ ಮುರುಳ್ಯ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಘ ಚಾಲಕ ಚಂದ್ರಶೇಖರ ತಳೂರು, ಸುಳ್ಯ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಯ ಸಭಾಪತಿ ಸುಧಾಕರ ರೈ ಪಿ.ಬಿ. ಮುಖ್ಯ ಅತಿಥಿಗಳಾಗಿದ್ದರು. ನವೀನ್ ರೈ ಗಳ ಸಹೋದರ ನಯನ್ ಕುಮಾರ್ ರೈ ಮೇನಾಲ ವೇದಿಕೆಯಲ್ಲಿ ಇದ್ದರು.

ರಾಜೇಶ್ ಶೆಟ್ಟಿ ಮೇನಾಲ ಮಾತನಾಡಿದರು. ಸುಭೋದ್ ಶೆಟ್ಟಿ ಮೇನಾಲ ಸ್ವಾಗತಿಸಿದರು.
ಬಾಲಕೃಷ್ಣ ಮೇನಾಲ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.