ಪುತ್ತೂರು ಸಹಾಯಕ ಕಮಿಷನರ್ ಜುಬಿನ್ ಮಹಾಪಾತ್ರ ನೂಚಿಲ ಗುಡ್ಡ ಜರಿತ ಪ್ರದೇಶಕ್ಕೆ ಭೇಟಿ

0

ಮಳೆಗಾಲದಲ್ಲಿ ಸುಬ್ರಹ್ಮಣ್ಯದ ನೂಚಿಲ ಭಾಗದಲ್ಲಿ ಹಲವಾರು ಮನೆಗಳಿಗೆ ಗುಡ್ಡಜರಿದು ಹಾನಿಯಾಗಿರುವುದು ಕಳೆದ ವರ್ಷ ನಡೆದಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಪುತ್ತೂರು ಸಹಾಯಕ ಕಮಿಷನರ್ ಜುಬಿನ್ ಮಹಾಪಾತ್ರ ಅವರು ಇತ್ತೀಚೆಗೆ ಸ್ಥಳಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಕಡಬ ತಹಶೀಲ್ದಾರ್ ಪ್ರಭಾಕರ ಕಚೂರೆ, ಉಪತಹಶೀಲ್ದಾರ್ ಮನೋಹರ್, ಕಂದಾಯ ನಿರೀಕ್ಷಕ ಪೃಥ್ವಿರಾಜ್, ಸುಬ್ರಹ್ಮಣ್ಯ ಪೊಲೀಸ್ ಉಪನಿರೀಕ್ಷಕ ಕಾರ್ತಿಕ್, ಸುಬ್ರಹ್ಮಣ್ಯ ವಲಯ ಅರಣ್ಯ ಅಧಿಕಾರಿ ವಿಮಲ್ ಬಾಬು , ಅರಣ್ಯ ಇಲಾಖೆ ಸಿಬ್ಬಂದಿಗಳು ಕಂದಾಯ ಇಲಾಖೆ ಸಿಬ್ಬಂದಿಗಳು ಹಾಗೂ ನಿವಾಸಿಗಳು ಹಾಜರಿದ್ದರು.