ಬೈತಡ್ಕ : ಕೆ.ಎಸ್.ಆರ್.ಟಿ.ಸಿ. ಬಸ್ – ಲಾರಿ ಅಪಘಾತ

0

ಅಪಘಾತ ನಡೆದ ತಕ್ಷಣ ರಸ್ತೆಯಲ್ಲೇ ಲಾರಿ ಬಿಟ್ಟು ಚಾಲಕ ಪರಾರಿ

ಕೆ‌.ಎಸ್.ಆರ್.ಟಿ.ಸಿ. ಸುಳ್ಯ -ಪುತ್ತೂರು ಬಸ್ ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿ, ಎರಡೂ ವಾಹನಗಳು ಜಖಂಗೊಂಡು, ಲಾರಿ ಬಿಟ್ಟು ಚಾಲಕ ಪರಾರಿಯಾಗಿರುವ ಘಟನೆ ಜಾಲ್ಸೂರು ಗ್ರಾಮದ ಬೈತಡ್ಕ ಎಂಬಲ್ಲಿ ಮೇ.21ರಂದು ಅಪರಾಹ್ನ ಸಂಭವಿಸಿದೆ.

ಪುತ್ತೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಬೈತಡ್ಕದ ತಿರುವಿನಲ್ಲಿ ಬರುತ್ತಿರುವ ವೇಳೆ ಮುಂಭಾಗದಿಂದ ಬಂದ ಲಾರಿ ಬಸ್ಸಿನ ಸೈಡ್ ಗೆ ಢಿಕ್ಕಿ ಹೊಡೆದಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿರುವುದಾಗಿ ತಿಳಿದುಬಂದಿದೆ.
ಪರಿಣಾಮವಾಗಿ ಎರಡೂ ವಾಹನಗಳು ಜಖಂಗೊಂಡಿದ್ದು, ಅಪಘಾತ ನಡೆದ ತಕ್ಷಣ ಲಾರಿ ಚಾಲಕ ಲಾರಿಯನ್ನು ರಸ್ತೆಯಲ್ಲೇ ನಿಲ್ಲಿಸಿ, ಪರಾರಿಯಾಗಿದ್ದು, ಸ್ಥಳಕ್ಕೆ ಸುಳ್ಯ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸುತ್ತಿದ್ದಾರೆ.