ಮೇ.30ರಂದು ಅರಂತೋಡು ತೊಡಿಕಾನ ವಲಯ ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನಾ ಸಭೆ

0

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ರಾಮಯ್ಯ ಅವರ ಪರವಾಗಿ ಚುನಾವಣಾ ಪ್ರಚಾರದಲ್ಲಿ ದುಡಿದ ಅರಂತೋಡು – ತೊಡಿಕಾನ ವಲಯ ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ ಹಾಗೂ ಅಗಲಿದ ಕಾಂಗ್ರೆಸ್ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ಸಂತಾಪ ಸೂಚಕ ಸಭೆಯು ಮೇ.30ರಂದು ಅರಂತೋಡಿನ ತೆಕ್ಕಿಲ್ ಸಮುದಾಯ ಭವನದಲ್ಲಿ ಸಂಜೆ ನಡೆಯಲಿದೆ.
ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು, ಜಿಲ್ಲಾ ನಾಯಕರು, ಬ್ಲಾಕ್ ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ.