ಮೇ.30 (ನಾಳೆ) ರಂದು ಈ ಭಾಗದಲ್ಲಿ ಕರೆಂಟಿಲ್ಲ

0

ಮೇ.30ರಂದು ಗುರುವಾರದಂದು ಸುಬ್ರಹ್ಮಣ್ಯ 33/11 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಪೂರ್ವಾಹ್ನ 10:00 ಗಂಟೆಯಿಂದ ಸಾಯಂಕಾಲ 5:00 ಗಂಟೆಯವರೆಗೆ 33ಕೆವಿ ಗುತ್ತಿಗಾರು-ಸುಬ್ರಹ್ಮಣ್ಯ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು.

ಆದ್ದರಿಂದ ಸುಬ್ರಹ್ಮಣ್ಯ ಉಪಕೇಂದ್ರದಿಂದ ಹೊರಡುವ ಹರಿಹರ, ನಡುಗಲ್ಲು, ಕುಮಾರಧಾರ, ಆದಿಶೇಷ, ಕೈಕಂಬ ಮತ್ತು ಯೇನೆಕಲ್ಲು 11ಕೆವಿ ಫೀಧರ್‌ಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸಬೇಕಾಗಿ ಕೋರಲಾಗಿದೆ ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.