ಬಡ್ಡಡ್ಕ ರಾಮಕೃಷ್ಣ ಅನುದಾನಿತ ಶಾಲೆಯ ನಿವೃತ್ತ ಶಿಕ್ಷಕ ಮಾರುತಿ ಬಸ್ಯಾ ನಾಯ್ಕರ್ ರಿಗೆ ಬೀಳ್ಕೊಡುಗೆ

0

ಬಡ್ಡಡ್ಕ ಶ್ರೀ ರಾಮಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ಸುಮಾರು 28 ವರ್ಷಗಳಿಂದ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಹಾವೇರಿ ಜಿಲ್ಲೆಯ ಇಟಗಿ ತಾಲೂಕಿನ ಮಾರುತಿ ಬಸ್ಯಾ ನಾಯ್ಕರ್ ರವರಿಗೆ ಮೇ.31 ರಂದು ಬೀಳ್ಕೊಡುಗೆ ಸಮಾರಂಭವನ್ನು ಶಾಲೆಯ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು.

ಶಾಲಾ ಸಂಚಾಲಕ ಡಾ.ಎನ್. ಎ. ಜ್ಞಾನೇಶ್ ರವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ಈ ಸಂದರ್ಭದಲ್ಲಿ ನಿವೃತ್ತ ರಾದ ಶಿಕ್ಷಕರಿಗೆ ಚಿನ್ನದ ಉಂಗುರ ನೀಡಿ ಸನ್ಮಾನಿಸಿ ಬೀಳ್ಕೊಡಲಾಯಿತು. ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕಿಯರು ಮತ್ತು ಎಸ್.ಡಿ.ಎಂ.ಸಿ ಸದಸ್ಯರು ನೆನಪಿನ ಕಾಣಿಕೆ ನೀಡಿ ಗೌರವಿಸಿದರು.


ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷೆ ಡಾ.ಸಾಯಿಗೀತಾ ಜ್ಞಾನೇಶ್,
ನಿವೃತ್ತ ಮುಖ್ಯ
ಶಿಕ್ಷಕ ರಾಮಕೃಷ್ಣ ಕಡಂಬಳಿತ್ತಾಯ,ನಿವೃತ್ತ ಶಿಕ್ಷಕಿ ಶ್ರೀಮತಿ ಗೀತಾ‌ ಪಿ. ಟಿ ಆಲೆಟ್ಟಿ , ಆಲೆಟ್ಟಿ ಸೊಸೈಟಿ ನಿವೃತ್ತ ಸಿ.ಇ.ಒ ಸುದಾಮ ಆಲೆಟ್ಟಿ‌ ಉಪಸ್ಥಿತರಿದ್ದರು. ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸದಸ್ಯರು, ಅದ್ಯಾಪಕ ವೃಂದದವರು, ಪೋಷಕರು,ವಿದ್ಯಾರ್ಥಿಗಳು ಭಾಗವಹಿಸಿದರು.


ಕು. ರಕ್ಷಿತಾ,ಕು. ಆತ್ಮಿಕ ಪ್ರಾರ್ಥಿಸಿದರು. ನಿವೃತ್ತ ಮುಖ್ಯ ಶಿಕ್ಷಕಿ ಶ್ರೀಮತಿ ಯಶೋಧ ಗುಂಡ್ಯಸ್ವಾಗತಿಸಿದರು.
ಸಹ ಶಿಕ್ಷಕಿ ಶ್ರೀಮತಿ ನವ್ಯ ಸನ್ಮಾನ ಪತ್ರ ವಾಚಿಸಿದರು. ಮುಖ್ಯ ಶಿಕ್ಷಕ ರಾಧಾಕೃಷ್ಣ ಕೊಯಿಂಗಾಜೆ ಕಾರ್ಯಕ್ರಮ ನಿರೂಪಿಸಿದರು.