ಜೂ 2: ಅಯ್ಯನಕಟ್ಟೆಯಲ್ಲಿ ಗೌರಿಪುರಂ ಶ್ರೀ ರಾಜರಾಜೇಶ್ವರೀ ದೇವಸ್ಥಾನ ಜೀರ್ಣೋದ್ಧಾರ ಕುರಿತು ಸಾರ್ವಜನಿಕ ಸಭೆ

0

1300 ವರ್ಷಗಳ ಇತಿಹಾಸವಿರುವ ಪುರಾತನ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಗೌರಿಪುರಂ ಬೆಳ್ಳಾರೆ ಇದರ ಜೀರ್ಣೋದ್ಧಾರ, ಪುನರ್ ನಿರ್ಮಾಣದ ಬಗ್ಗೆ ಸಾರ್ವಜನಿಕ ಸಭೆ ಜೂ. 2ರಂದು ಸಂಜೆ 3.00 ಗಂಟೆಗೆ ಅಯ್ಯನಕಟ್ಟೆಯ ಪಂಡಿತ್ ದೀನ ದಯಾಳ್ ಸಮುದಾಯ ಭವನದಲ್ಲಿ ನಡೆಯಲಿದೆ.
ಸುಮಾರು 8 ಕೋಟಿ ಅಂದಾಜು ವೆಚ್ಚದಲ್ಲಿ ನಿರ್ಮಾಣವಾಗುತ್ತಿರು ದೇವಸ್ಥಾನದ ಗರ್ಭಗುಡಿ ನಿರ್ಮಾಣ ಕಾರ್ಯ ನಡೆಯುತ್ತಿದೆ. ಮುಂದಿನ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಲು ಆರ್ಥಿಕ ಸಂಗ್ರಹದ ಅಗತ್ಯವಿದ್ದು, ಈ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದೆಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯಕ್ ಪೊಸವಳಿಗೆ ಪಂಜಿಗಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.