ಅಪ್ರಾಪ್ತ ಬಾಲಕಿ ನೇಣು ಬಿಗಿದು ಆತ್ಮಹತ್ಯೆ

0


ಐವರ್ನಾಡಿನ ನಿಡುಬೆಯಲ್ಲಿ ನಡೆದ ಘಟನೆ


ಐವರ್ನಾಡು ಗ್ರಾಮದ ನಿಡುಬೆ ಸಿ.ಆರ್.ಸಿ ಕಾಲನಿಯಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ.


ಐವರ್ನಾಡು ಗ್ರಾಮದ ನಿಡುಬೆ ಸಿ.ಆರ್.ಸಿ ಕಾಲನಿಯ ಇಲಯರಾಜ್‌ರವರ ಪುತ್ರಿ 15 ವರ್ಷದ ಕೀರ್ತನ
ನೇಣು ಬಿಗಿದುಕೊಂಡಿದ್ದು, ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಆಕೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.