ಬೆಳ್ಳಾರೆ: ಯಾದವ ಸಭಾ ಪ್ರಾದೇಶಿಕ ಸಮಿತಿ ವತಿಯಿಂದ ಸಮುದಾಯದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

0

ಬೆಳ್ಳಾರೆ ಯಾದವ ಸಭಾ ಪ್ರಾದೇಶಿಕ ಸಮಿತಿಯ ವತಿಯಿಂದ ಸಮುದಾಯದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮವು ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಜೂ.2ರಂದು ನಡೆಯಿತು.

ಬೆಳ್ಳಾರೆ ಪ್ರಾದೇಶಿಕ ಸಮಿತಿ ಅಧ್ಯಕ್ಷ ಆನಂದ ಉಮಿಕ್ಕಳ ಅವರು ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಯಾದವ ಸಭಾ ಕೇಂದ್ರ ಸಮಿತಿ ಅಧ್ಯಕ್ಷ ಎ‌‌.ಕೆ. ಮಣಿಯಾಣಿ ಬೆಳ್ಳಾರೆ, ಸುಳ್ಯ ತಾಲೂಕು ಸಮಿತಿ ಅಧ್ಯಕ್ಷ ಕರುಣಾಕರ ಹಾಸ್ಪಾರೆ, ತಾಲೂಕು ಸಮಿತಿ ಕಾರ್ಯದರ್ಶಿ ಕೃಷ್ಣ ಬೆಟ್ಟ, ತಾಲೂಕು ಸಮಿತಿಯ ಮಹಿಳಾ ವೇದಿಕೆ ಅಧ್ಯಕ್ಷೆ ಶ್ರೀಮತಿ ರಾಜೀವಿ ಪರ್ಲಿಕಜೆ ಉಪಸ್ಥಿತರಿದ್ದರು. ಶಶಿಪ್ರಭಾ ಪೆರುವಾಜೆ ಸ್ವಾಗತಿಸಿ, ಶಶಿಧರ ಮಣಿಯಾಣಿ ಬೀಡು ವಂದಿಸಿದರು. ಶ್ರೀಮತಿ ಸುಲೋಚನ ಚಂದ್ರಹಾಸ ಬೆಳ್ಳಾರೆ ಅವರು ಕಾರ್ಯಕ್ರಮ ನಿರೂಪಿಸಿದರು‌.