ಬೆಳ್ಳಾರೆ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅಭಿವೃದ್ಧಿ ಕುರಿತು ಅಯ್ಯನಕಟ್ಟೆಯಲ್ಲಿ ಭಕ್ತಾದಿಗಳ ಸಭೆ

0

ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅಭಿವೃದ್ಧಿ ಕಾರ್ಯ ಭರದಿಂದ ಸಾಗುತ್ತಿದ್ದು, ಈ ಬಗ್ಗೆ ಕಾರ್ಯ ಪೂರ್ಣಗೊಳ್ಳಲು ಆರ್ಥಿಕ ಒಗ್ಗೂಡಿಸುವಿಕೆಗಾಗಿ ಕಳಂಜ, ಬಾಳಿಲ ಮತ್ತು ಮುಪ್ಪೇರ್ಯ ಗ್ರಾಮಸ್ಥರನ್ನೊಳಗೊಂಡ ಭಕ್ತಾದಿಗಳ ಸಭೆ ಜೂ. 2ರಂದು ಅಯ್ಯನಕಟ್ಟೆ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಸಭಾಂಗಣದಲ್ಲಿ ನಡೆಯಿತು.


ಈಗಾಗಲೇ ಗರ್ಭಗುಡಿಯ ನಿರ್ಮಾಣ ಕಾರ್ಯ ಪೂರ್ಣ ಹಂತಕ್ಕೆ ತಲುಪಿದ್ದು, ಇನ್ನುಳಿದ ಅಭಿವೃದ್ಧಿ ಕಾರ್ಯಗಳು ನಡೆಯಲಿದೆ. ಈ ಬಗ್ಗೆ ಧನ ಸಂಗ್ರಹ ಕಾರ್ಯಕ್ಕೆ ವೇಗ ಕೊಡುವ ಉದ್ದೇಶದಿಂದ ತಾಲೂಕಿನ ವಿವಿಧ ಭಾಗಗಳಲ್ಲಿ ಭಕ್ತಾದಿಗಳ ಸಭೆಯನ್ನು ನಡೆಸಲಾಗುತ್ತಿದೆ.

ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯಕ್ ಪೊಸವಳಿಗೆ ಪಂಜಿಗಾರು ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು, ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರಹಾಸ ಮಣಿಯಾಣಿ ಮತ್ತು ಪದಾಧಿಕಾರಿಗಳು ಮತ್ತು ಸದಸ್ಯರು ಮೂರು ಗ್ರಾಮಗಳ ಭಕ್ತಾದಿಗಳು ಸಭೆಯಲ್ಲಿ ಉಪಸ್ಥಿತರಿದ್ದು, ಸಲಹೆ ಸೂಚನೆಗಳನ್ನು ನೀಡಿದರು.

ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ಪ್ರದೀಪ್ ಕುಮಾರ್ ರೈ ಪನ್ನೆ ಪ್ರಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು.