ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ನಾರಾಯಣ ಕಳಿಗೆ ನಿಧನ

0

ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿದ್ದ ಬಿಳಿನೆಲೆಯ ಚೇರು ನಿವಾಸಿ ನಾರಾಯಣ ಕಳಿಗೆ ಅವರು ಇಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

2023ರ ಸೆಪ್ಟೆಂಬರ್ ನಲ್ಲಿ ಬ್ರೈನ್ ಸ್ಟ್ರೋಕ್ ಆಗಿ ಚಿಕಿತ್ಸೆ ಪಡೆಯುತ್ತಿದ್ದರು. ನಾಳೆ ಜೂ.3 ರ ಬೆಳಗ್ಗೆ ಅವರ ಅಂತಿಮ ಸಂಸ್ಕಾರ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿದು ಬಂದಿದೆ.

ಮೃತರು ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಮಾಲತಿ, ಓರ್ವ ಪುತ್ರಿ ಹಾಗೂ ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.