ಹಿರಿಯ ಪತ್ರಕರ್ತರಾದ ಗಂಗಾಧರ್ ಮಟ್ಟಿ ಹಾಗೂ ಜಯಪ್ರಕಾಶ್ ಕುಕ್ಕೆಟ್ಟಿ ದಂಪತಿಗಳಿಗೆ ಪ್ರೆಸ್ ಕ್ಲಬ್ ನಲ್ಲಿ ಗೌರವ

0

75 ವಸಂತದಲ್ಲಿರುವ ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿ ಹಾಗೂ 60 ವರ್ಷ ತುಂಬಿದ ಹಿರಿಯ ಪತ್ರಕರ್ತ ಜಯಪ್ರಕಾಶ್ ಕುಕ್ಕೆಟ್ಟಿ ಯವರಿಗೆ ಸುಳ್ಯ ಪ್ರೆಸ್ ಕ್ಲಬ್ ವತಿಯಿದ ಗೌರವಾರ್ಪಣೆ ಜೂ.3ರಂದು ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ನಡೆಯಿತು.

ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಂಗಾಧರ್ ಮಟ್ಟಿ – ಶ್ರೀಮತಿ ಚಿತ್ರಾ ಮಟ್ಟಿ ಹಾಗೂ ಜಯಪ್ರಕಾಶ್ ಕುಕ್ಕೆಟ್ಟಿ – ಶ್ರೀಮತಿ ಕುಸುಮಾ ದಂಪತಿಗಳನ್ನು ಸಮಾರಂಭದಲ್ಲಿ ಶಾಲು, ಹಾರ, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಸುದ್ದಿ‌ ಬಿಡುಗಡೆ ಪತ್ರಿಕೆಯ ಸಂಪಾದಕರಾಗಿ ನೇಮಕಗೊಂಡ ಹರೀಶ್ ಬಂಟ್ವಾಳ್ ರನ್ನು ಪ್ರೆಸ್ ಕ್ಲಬ್ ವತಿಯಿಂದ ಗೌರವಿಸಲಾಯಿತು.

ಸಾಮಾಜಿಕ ಚಿಂತಕ ಎಂ.ಬಿ.ಸದಾಶಿವರು ಅಭಿನಂದನಾ ಭಾಷಣ ಮಾಡಿದರು.

ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಭಾಗವಹಿಸಿದ್ದರು. ಅವರು ಸಮಾರಂಭದಲ್ಲಿ ಭಾಗವಹಿಸಿದ್ದ ಪತ್ರಕರ್ತರಿಗೆ ಸಂವಿಧಾನ ಓದು ಪುಸ್ತಕ ವಿತರಣೆ ಮಾಡಿದರು.

ಗಂಗಾಧರ್ ಕಲ್ಲಪಳ್ಳಿ ಹಿರಿಯ ಪತ್ರಕರ್ತರ ಪರಿಚಯ ಮಾಡಿದರು. ಪ್ರೆಸ್ ಕ್ಲಬ್ ಕೋಶಾಧಿಕಾರಿ ರಮೇಶ್ ನೀರಬಿದಿರೆ ಸ್ವಾಗತಿಸಿದರು. ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು.