ದೇವರಕೊಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ -ಚಾಲಕನಿಗೆ ಗಾಯ

0

ಚಾಲಕನ ನಿಯಂತ್ರಣ ತಪ್ಪಿದ ಲಾರಿ ಪಲ್ಟಿಯಾಗಿ ಬಿದ್ದ ಘಟನೆ ಕೊಯನಾಡು ಸಮೀಪದ ದೇವರಕೊಲ್ಲಿಯಲ್ಲಿ ಜೂ 5ರಂದು ಸಂಭವಿಸಿದೆ.

ತಮಿಳುನಾಡಿನಿಂದ ಮಡಿಕೇರಿ ಮೂಲಕ ಮಂಗಳೂರಿಗೆ ಕೋಳಿ ಗೊಬ್ಬರ ಹೊತ್ತೊಯ್ಯುತ್ತಿದ್ದ ಲಾರಿ ದೇವರಕೊಲ್ಲಿಯ ಜಸ್ಮಿತ ಹೋಟೆಲ್ ಬಳಿಯ ತಿರುವಿನಲ್ಲಿ ಪಲ್ಟಿಯಾಗಿದ್ದು, ಲಾರಿ ಚಾಲಕನಿಗೆ ಗಾಯವಾಗಿರುವುದಾಗಿ ತಿಳಿದುಬಂದಿದೆ.
ಗಾಯಾಳು ಲಾರಿ ಚಾಲಕನನ್ನು ಸುಳ್ಯದ ಆಸ್ಪತ್ರೆಗೆ ಕರೆತರಲಾಗಿದೆ ಎಂದು ತಿಳಿದು ಬಂದಿದೆ.