ಕುಕ್ಕಟ್ಟೆ ಶ್ರೀ ಕಾಳಿಕಾಪರಮೇಶ್ವರೀ ಭದ್ರಕಾಳಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

0


ಮುರುಳ್ಯ ಗ್ರಾಮದ ಕುಕ್ಕಟ್ಟೆ ಶ್ರೀ ಕಾಳಿಕಾಪರಮೇಶ್ವರೀ ಭದ್ರಕಾಳಿ ದೇವಸ್ಥಾನದಲ್ಲಿ 2ನೇ ವರ್ಷದ ಪ್ರತಿಷ್ಠಾ ವರ್ಧಂತಿ ಉತ್ಸವವು ಜೂ. 16ರಂದು ನಡೆಯಲಿದೆ.
ಪ್ರತಿಷ್ಠಾ ವರ್ಧಂತಿ ಉತ್ಸವವು ವೇದಮೂರ್ತಿ ಎನ್. ಕೇಶವ ತಂತ್ರಿಗಳು ಮೂಡಬಿದ್ರೆ
ಇವರ ನೇತೃತ್ವದಲ್ಲಿ
ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.


ಜೂ.11ರಂದು
ಬೆಳಿಗ್ಗೆ ಗಂಟೆ 10-00ರಿಂದ ಹೊರೆಕಾಣಿಕೆ ಸಮರ್ಪಣೆ,ಸಂಜೆ ಗಂಟೆ 06-00ರಿಂದ ವಾಸ್ತು, ರಾಕ್ಷೋಘ್ನ, ನವಗ್ರಹ ಹೋಮ, ವಾಸ್ತುಬಲಿ, ದಿಗ್ಬಲಿ ನಡೆಯಲಿದೆ.
ಜೂ. 12 ರಂದುಬೆಳಿಗ್ಗೆ ಗಂಟೆ 7-00ರಿಂದ ಗುರುಗಣಪತಿ ಪೂಜೆ, ಪುಣ್ಯಾಹವಾಚನ, ಗಣಪತಿ ಹೋಮ, ನಾಗ ಅಭಿಷೇಕ,
ಬೆಳಿಗ್ಗೆ ಗಂಟೆ 8-00ರಿಂದ ದೇವರಿಗೆ ನವಕ ಕಲಾಹೋಮ ಕಲಶಾಭಿಷೇಕ ಪ್ರಸನ್ನ ಪೂಜೆ ದೇವರ ಪ್ರೀತ್ಯರ್ಥವಾಗಿ ಭದ್ರಕಾಳಿ ಹೋಮ ,ಬೆಳಿಗ್ಗೆ ಗಂಟೆ 10-30ರಿಂದಪೂಜೆ ಪೂರ್ಣಾಹುತಿ
ಮಧ್ಯಾಹ್ನ ಗಂಟೆ 12-30ರಿಂದ
ಮಹಾಪೂಜೆ, ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ


ಸಂಜೆ ಗಂಟೆ 05-00ರಿಂದ
ಭಗವದ್ಭಕ್ತರು ಹಾಗೂ ಸಂಘ ಸಂಸ್ಥೆಗಳ ಮೂಲಕ ಭಜನಾ ಸಂಕೀರ್ತನೆ ಮತ್ತು ಯಕ್ಷಗಾನ ಬಯಲಾಟ ನಡೆಯಲಿದೆ.
ಬೆಳಿಗ್ಗೆ ಗಂಟೆ 11-00ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು,ನಿವೃತ್ತ ಉಪನ್ಯಾಸಕ ಜಯರಾಜ್ ಆಚಾರ್ಯ ಕಳತ್ತಾಜೆ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.ಶಾಸಕಿ ಭಾಗೀರಥಿ ಮುರುಳ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.