ನಾಳೆ (ಜೂ.9) : ಹಾಲೆಮಜಲಿನಲ್ಲಿ ಮಳೆ ನೀರು ಕೊಯ್ಲು ಪ್ರಾತ್ಯಕ್ಷಿಕೆ ಹಾಗೂ ಹಣ್ಣಿನ ಗಿಡ ವಿತರಣಾ ಕಾರ್ಯಕ್ರಮ

0

ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ.) ಮಂಗಳೂರು, ವಿಜಯ ಗ್ರಾಮಾಭಿವೃದ್ಧಿ ಸಮಿತಿ ನಾಲ್ಕೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರಧ್ಧಿ ಯೋಜನೆ (ರಿ.) ನಾಲ್ಕೂರು ಒಕ್ಕೂಟ, ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ, ಸುದ್ದಿ ಕೃಷಿ ಸೇವಾ ಕೇಂದ್ರ ಸುಳ್ಯ, ಅರಣ್ಯ ಇಲಾಖೆ ಸುಬ್ರಹ್ಮಣ್ಯ, ಆತ್ಮರೈತ ಮಿತ್ರ ಮಹಿಳಾ ಸ್ವಸಹಾಯ ಸಂಘ ನಾಲ್ಕೂರು ಹಾಗೂ ಇತರ ಸಂಘ ಸಂಸ್ಥೆಗಳ ನೆರವಿನೊಂದಿಗೆ ಮಳೆ ನೀರು ಕೊಯ್ಲು ಪ್ರಾತ್ಯಕ್ಷಿಕೆ ಹಾಗೂ ಹಣ್ಣಿನ ಗಿಡ ವಿತರಣಾ ಕಾರ್ಯಕ್ರಮ ಜೂ.9ರಂದು ಬೆಳಿಗ್ಗೆ 10.30ಕ್ಕೆ ಹಾಲೆಮಜಲಿನ ಶ್ರೀ ವೆಂಕಟೇಶ್ವರ ಸಭಾಭವನದಲ್ಲಿ ನಡೆಯಲಿದೆ.

ಉಪ ವಲಯ ಅರಣ್ಯಾಧಿಕಾರಿ ಸದಾಶಿವ ಸಿಂದಿಗಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪುತ್ತೂರಿನ ಅರಿವು ಕೃಷಿ ಕ್ಲಿನಿಕ್ ನ ಹೊನ್ನಪ್ಪ ಗೌಡ ಬನ್ನೂರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಮಾಹಿತಿ ನೀಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.