ಜೂ.16: ಸುಳ್ಯ ಪಾಟಾಳಿ ಯಾನೆ ಗಾಣಿಗ ಸಮಾಜದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

0

ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಬಿಡುಗಡೆ

ಸುಳ್ಯ ಪಾಟಾಳಿ ಯಾನೆ ಗಾಣಿಗ ಸಮಾಜದ ವತಿಯಿಂದ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯು ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ಜೂ.16 ರಂದು ನಡೆಯಲಿದ್ದು, ಇದರ ಪೂರ್ವಾಭಾವಿ ಸಭೆ ಹಾಗೂ ಆಮಂತ್ರಣ ಪತ್ರ ಬಿಡುಗಡೆ ಜೂ.02 ರಂದು ಕೇರ್ಪಳದ ಸಂಧ್ಯಾರಶ್ಮಿ ಸಭಾಭವನದಲ್ಲಿ ನಡೆಯಿತು.

ಸಂಘದ ಗೌರವ ಸಲಹೆಗಾರರಾದ ಶಂಕರ ಮಾಸ್ತರ್ ಪರಿವಾರಕಾನರವರು ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು.
ಈ ಸಂಧರ್ಭದಲ್ಲಿ ಸಂಘದ ಆಂತರಿಕ ಲೆಕ್ಕಪರಿಶೋಧಕರಾದ ಮಹಾಲಿಂಗನ್ ಬಾಜಿರ್ತೊಟ್ಟಿ, ಸಂಘದ ಗೌರವ ಸಲಹೆಗಾರರಾದ ವೆಂಕಟ್ರಮಣ ಬೇರ್ಪಡ್ಕ ಹಾಗೂ ಸಂಘದ ಕಾರ್ಯಕಾರಿ ಸಮಿತಿ, ಬೈಲುವಾರು ಸಮಿತಿ, ಮಹಿಳಾ ಸಮಿತಿಗಳ ಸಂಚಾಲಕರು, ಪದಾಧಿಕಾರಿಗಳು, ನಿರ್ದೇಶಕರು ಹಾಗೂ ಸಮುದಾಯ ಬಾಂಧವರು ಭಾಗವಹಿಸಿದ್ದರು.
ಸಂಘದ ಜೊತೆ ಕಾರ್ಯದರ್ಶಿ ಸೌಮ್ಯಾ ಇರಂತಮಜಲು ಸ್ವಾಗತಿಸಿ, ವಂದಿಸಿದರು.