ಸುಬ್ರಹ್ಮಣ್ಯ: ಸೀನಿಯರ್ ಚೇಂಬರ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ

0

ಸುಬ್ರಹ್ಮಣ್ಯದಲ್ಲಿ ಸೀನಿಯರ್ ಚೇಂಬರ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಜೂ9 ಸುಬ್ರಹ್ಮಣ್ಯ ದ ಪ್ರಾಥಮಿಕ ಆರೋಗ್ಯ ಕೇಂದ್ರದ ವಠಾರದಲ್ಲಿ ಗಿಡಗಳನ್ನು ನೆಡುವುದರ ಮೂಲಕ ಆಚರಿಸಲಾಯಿತು.

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆಶ್ರೀ ಸುಬ್ರಹ್ಮಣ್ಯ ಲೀಜನ್ ಹಾಗೂ ರವಿಕಕ್ಕೆ ಪದವು ಸಮಾಜ ಸೇವ ಟ್ರಸ್ಟ್ ವತಿಯಿಂದ ಜಂಟಿಯಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸೀನಿಯರ್ ಚೇಂಬರ್ ಸುಬ್ರಮಣ್ಯ ಲಿಜನ್‌ನ ಅಧ್ಯಕ್ಷ ಡಾl ರವಿಕಕ್ಕೆ ಪದವು ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸೀನಿಯರ್ ಚೇಂಬರ್ ಸುಬ್ರಹ್ಮಣ್ಯ ಲಿಜನ್ ನ ಸ್ಥಾಪಕ ಅಧ್ಯಕ್ಷ ವಿಶ್ವನಾಥ ನಡುತೋಟ ಎಲ್ಲರನ್ನ ಸ್ವಾಗತಿಸಿದರು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಪೂರ್ವ ಅಧ್ಯಕ್ಷ ಗಿರಿಧರ ಸ್ಕಂದ, ಸೀನಿಯರ್ ಚೇಂಬರ್ ಸದಸ್ಯ ಅಶೋಕ್ ಕುಮಾರ್ ಮೂಲೆ ಮಜಲು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಮುದಾಯ ಅಭಿವೃದ್ಧಿ ಅಧಿಕಾರಿ ರೇಣುಕಾ ,ಸಹಾಯಕಿ ಲಲಿತ ,ರವಿ ಕಕ್ಕೆ ಪದವ ಸಮಾಜ ಸೇವಾ ಟ್ರಸ್ಟ್ ನ ಸರ್ವ ಸದಸ್ಯರುಗಳು ಹಾಜರಿದ್ದರು. ಇದೇ ಸಂದರ್ಭದಲ್ಲಿ ರವಿ ಕಕ್ಕೆ ಪದ ಸಮಾಜ ಸೇವಾ ಟ್ರಸ್ಟ್ ನ ಸದಸ್ಯರುಗಳ ಹಾಗೂ ಸೀನಿಯರ್ ಚೇಂಬರ್ ನ ಸದಸ್ಯಗಳ ಬಿ.ಪಿ ,ಶುಗರ್ ಮುಂತಾದವುಗಳ ಪರೀಕ್ಷೆಗಳನ್ನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾಡಲಾಯಿತು.