ರೆಂಜಾಳದಲ್ಲಿ ವನಮಹೋತ್ಸವ ಕಾರ್ಯಕ್ರಮ

0

ಮರ್ಕಂಜದ ರೆಂಜಾಳ ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ವನಮಹೋತ್ಸವ ಆಚರಣೆ ಜೂ.9ರಂದು ನಡೆಯಿತು.


ರಾಜ್ಯ ಪ್ರಶಸ್ತಿ ಪುರಸ್ಕೃತ ಯುವಜನ ಸಂಯುಕ್ತ ಮಂಡಳಿ ಸುಳ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಾಸ್ತಾವು ಯುವಕ ಮಂಡಲ ರೆಂಜಾಳ ಜಂಟಿಯಾಗಿ ಕಾರ್ಯಕ್ರಮ ಆಯೋಜಿಸಿತು. ಕಾರ್ಯಕ್ರಮವನ್ನು ದೇವಳದ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಭಟ್ ಬಳ್ಳಕ್ಕಾನ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಶಾಸ್ತಾವು ಯುವಕ ಮಂಡಲದ ಅಧ್ಯಕ್ಷ ಶಶಿಕಾಂತ ಗುಳಿಗಮೂಲೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷ ಪ್ರವೀಣ್ ಕುಮಾರ್, ವ್ಯವಸ್ಥಾಪನ ಸಮಿತಿಯ ನಿಕಟ ಪೂರ್ವ ಅಧ್ಯಕ್ಷ ರಾಘವ ಗೌಡ ಕಂಜಿಪಿಲಿ, ಮರ್ಕಂಜ ಬೀಟ್ ಫಾರೆಸ್ಟರ್ ಜಯಪ್ರಕಾಶ್, ದೇವಳದ ಅನ್ನಪೂರ್ಣ ಸಮಿತಿಯ ದಾಮೋದರ ಪಾಟಾಳಿ ಮಿತ್ತಡ್ಕ, ಸತೀಶ ರಾವ್ ದಾಸರಬೈಲು ಯುವಕ ಮಂಡಲದ ಕಾರ್ಯದರ್ಶಿ ಶಿವರಂಜನ್ ರಾವ್ ದಾಸರಬೈಲು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಯುವಕ ಮಂಡಲದ ನೂತನ ಸದಸ್ಯರುಗಳಾಗಿ ಕಿರಣ್ ಕಾಡುತೋಟ, ಚರಣ್ ಕಾಪಿಲ ಮತ್ತು ಲಿತೇಶ್ ಬಾಣೂರು ಸೇರ್ಪಡೆಗೊಂಡರು. ಇದೇ ಸಂದರ್ಭದಲ್ಲಿ ದೇವಳದ ವಠಾರದಲ್ಲಿ ಗಿಡ ನೆಡಲಾಯಿತು. ಬಳಿಕ ಯುವಕ ಮಂಡಲದ ಸದಸ್ಯರಿಂದ ದೇವಳದಲ್ಲಿ ಶ್ರಮದಾನ ಕಾರ್ಯ ನಡೆಯಿತು.