ಸುಳ್ಯದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಕೋರ್ ಕಮಿಟಿ ಸಭೆ

0

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸುಳ್ಯ, ತಾಲೂಕು ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ‌ ಇದರ ವತಿಯಿಂದ ಸುಳ್ಯ ಯೋಜನಾ ಕಛೇರಿಯ ಸಭಾಂಗಣದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಕೋರ್ ಕಮಿಟಿ ಸಭೆಯು ನಡೆಯಿತು.

ಯೋಜನಾಧಿಕಾರಿ ಮಾಧವ ದೀಪ ಬೆಳಗಿಸಿ ಶುಭ ಹಾರೈಸಿದರು.
ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ವಿಪತ್ತು ಘಟಕದ ಸದಸ್ಯರಿಗೆ ಮಾಹಿತಿ ಮಾರ್ಗದರ್ಶನ ನೀಡಿದರು.
ಕೇಂದ್ರ ಕಛೇರಿ ಜನಜಾಗೃತಿ ವೇದಿಕೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಯೋಜನಾಧಿಕಾರಿ ಜೈವಂತ್ ಪಟಗಾರ,
ಉಡುಪಿ ಪ್ರಾದೇಶಿಕ ವ್ಯಾಪ್ತಿಯ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಗಣೇಶ್, ಜನಜಾಗೃತಿ ವೇದಿಕೆಯ ಮೇಲ್ವಿಚಾರಕ ನಿತೇಶ್ ಕೆ, ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಜಯರಾಮ ಪಿ ಜಿ ಸುಳ್ಯ, ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಕ್ಯಾಪ್ಟನ್ ಸತೀಶ್ ನಾಲ್ಕೂರು ಉಪಸ್ಥಿತರಿದ್ದರು.
ಈ ಕೋರ್ ಸಮಿತಿ ಸಭೆಯಲ್ಲಿ ತಾಲೂಕಿನ ಎಲ್ಲಾ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರು, ಪ್ರತಿನಿಧಿಗಳು, ಮೇಲ್ವಿಚಾರಕರು,
ಕೃಷಿ ಮೇಲ್ವಿಚಾರಕರು, ಆಡಳಿತ ಪ್ರಬಂಧಕರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಬೆಳ್ಳಾರೆ ಮೇಲ್ವಿಚಾರಕಿ ವಿಶಾಲಾಕ್ಷಿ ಕಾರ್ಯಕ್ರಮ ನಿರೂಪಿಸಿದರು. ಜಾಲ್ಸೂರು ಮೇಲ್ವಿಚಾರಕ ತೀರ್ಥರಾಮ ಸ್ವಾಗತಿಸಿದರು. ಸಂಪಾಜೆ ಮೇಲ್ವಿಚಾರಕ ಗಂಗಾಧರ ವಂದಿಸಿದರು.