ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಗಳ ಪ್ರವೇಶೋತ್ಸವ

0

ಜ್ಞಾನದೀಪ ವಿದ್ಯಾ ಸಂಸ್ಥೆಗಳು ಎಲಿಮಲೆ ಇಲ್ಲಿ ಜೂ.3ರಂದು ಪ್ರವೇಶೋತ್ಸವ , ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಮತ್ತು ಪೋಷಕರ ಸಭೆ ನಡೆಯಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಆರತಿ ಬೆಳಗಿ ಶೈಕ್ಷಣಿಕ ಸಾಲಿಗೆ ಶುಭ ಕೋರಲಾಯಿತು. ನಂತರ ವಿದ್ಯಾರ್ಥಿಗಳು ತಮ್ಮ ಹೆತ್ತವರ ಆಶೀರ್ವಾದವನ್ನು ಪಡೆದುಕೊಂಡರು.

ಸಭಾ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಗದಾಧರ ಬಾಳುಗೋಡು ಸ್ವಾಗತಿಸಿದರು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಶೇಖರ ತಳೂರು ಅಧ್ಯಕ್ಷತೆ ವಹಿಸಿದ್ದರು. ಸಂಚಾಲಕ ಎ.ವಿ. ತೀರ್ಥರಾಮ ಪ್ರಾಸ್ತಾವಿಕವಾಗಿ ಮಾತನಾಡಿದರು.


ಕಾರ್ಯಕ್ರಮದಲ್ಲಿ ಎಸೆಸೆಲ್ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ಪಡೆದ ವಿದ್ಯಾರ್ಥಿ ತಂಡವನ್ನು ಅಭಿನಂದಿಸಲಾಯಿತು . 100%ಫಲಿತಾಂಶ ಪಡೆಯಲು ಸಹಕರಿಸಿದ ಶಿಕ್ಷಕರನ್ನು ಆಡಳಿತ ಮಂಡಳಿ ವತಿಯಿಂದ ಅಭಿನಂದಿಸಲಾಯಿತು.

ಶಾಲಾ ಆಡಳಿತ ಮಂಡಳಿಯ ನಿರ್ದೇಶಕರುಗಳಾದ ರಾಧಾಕೃಷ್ಣ ಮಾವಿನಕಟ್ಟೆ, ಕೃಷ್ಣಯ್ಯ ಮೂಲೆತೋಟ , ಕೃಷ್ಣ ಭಟ್ ಗುಂಡಿ ಮಜಲು, ಮೋಹನ್ ರಾಂ ಸುಳ್ಳಿ , ಶಿಕ್ಷಕರ ರಕ್ಷಕ ಸಂಘದ ಅಧ್ಯಕ್ಷರಾದ ಇಂದಿರೇಶ ಗುಡ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಕು. ಕೀರ್ತಿಶ್ರೀ ಪ್ರಾರ್ಥನೆಗೈದರೆ, ಸಹಶಿಕ್ಷಕ ಪುನೀತ್ ರವಿ ಧನ್ಯವಾದಗೈದರು. ಶ್ರೀಮತಿ ರೇಖಾ ಕಿರಣ್ ಗುಡ್ಡೆಮನೆ ಮತ್ತು ಶ್ರೀಮತಿ ಶ್ರೀಲತಾ ಕಾರ್ಯಕ್ರಮ ನಿರೂಪಿಸಿದರು.