ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ತುಲಾಭಾರ ಸೇವೆ

0


ಮಾಜಿ ಮುಖ್ಯ ಮಂತ್ರಿ ಯಡಿಯೂರಪ್ಪ ಅವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದು, ದೇವಸ್ಥಾನ ವತಿಯಿಂದ ಅಧಿಕಾರಗಳು ಸ್ವಾಗತಿಸಲಾಯಿತು. ನಂತರ ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು. ಬಳಿಕ ನಾಣ್ಯಗಳಿಂದ ತುಲಾಭಾರ ಸೇವೆ ನಡೆಸಿದರು.


ನಂತರ ಮಹಾಭಿಷೇಕ ಮಹಾಪೂಜೆ ಸೇವೆ ನಡೆಸಿ, ಮಧ್ಯಾಹ್ನ ಸುಳ್ಯಕ್ಕೆ ಆಗಮಿಸುವ ಯಡಿಯೂರಪ್ಪರು, ಸುಳ್ಯದ ಬಿಜೆಪಿ ಕಚೇರಿಯನ್ನು ಉದ್ಘಾಟಿಸಲಿದ್ದಾರೆ
.

ಈ ಸಂದರ್ಭ ಮಾಜಿ ಸಚಿವ ಎಸ್ ಅಂಗಾರ, ಹಾಲಿ ಶಾಸಕಿ ಭಾಗೀರಥಿ ಮುರುಳ್ಯ, ನಿಕಟ ಪೂರ್ವ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಸದಸ್ಯ ಪ್ರಸನ್ನ ದರ್ಬೆ, ಬಿಜೆಪಿ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.