ಜೂ.29 : ಬೆಳ್ಳಾರೆ ಕೆಪಿಎಸ್ ನ ಶಿಕ್ಷಕ ರಾಮಚಂದ್ರ ಭಟ್ ಮುಗುಳಿಯವರಿಗೆ ಗೌರವ ಸನ್ಮಾನ ಹಾಗೂ ವಿದಾಯ ಸಮಾರಂಭ

0

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರೌಢಶಾಲಾ ಗಣಿತ ಶಿಕ್ಷಕರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿ ಜೂ.30 ರಂದು ಸೇವಾ ನಿವೃತ್ತಿಗೊಳ್ಳಲಿರುವ ಶಿಕ್ಷಕ ರಾಮಚಂದ್ರ ಭಟ್ ಮುಗುಳಿಯವರಿಗೆ ಗೌರವ ಸನ್ಮಾನ ಹಾಗೂ ವಿದಾಯ ಸಮಾರಂಭವು ಜೂ.29 ರಂದು ಕೆಪಿಎಸ್ ನ ನಾರಾಯಣ ಶೇಖ ಸಭಾಭವನದಲ್ಲಿ ನಡೆಯಲಿದೆ.
ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಲಿದ್ದಾರೆ.
ಉಜಿರೆ ಎಸ್.ಡಿ.ಎಂ ಕಾಲೇಜಿನ ಸಂಸ್ಕೃತ ವಿಭಾಗ ಮುಖ್ಯಸ್ಥ ಡಾ.ಶ್ರೀಧರ ಭಟ್ ಅಭಿನಂದಿಸಲಿದ್ದಾರೆ.
ಬೆಳಾಲು ಪ್ರೌಢಶಾಲೆಯ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಅಭಿನಂದನಾ ಮಾತು ಆಡಲಿದ್ದಾರೆ.
ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ನಮಿತಾ ಎಲ್ ರೈ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಎಸ್.ಎನ್.ಮನ್ಮಥ, ಶ್ರೀಮತಿ ರಾಜೀವಿ ಆರ್.ರೈ,ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಈ ಅಭ್ಯಾಗತರಾಗಿ ಉಪಸ್ಥಿತರಿರುವರು.