ಬೆಳ್ಳಾರೆ ಕೆ.ಪಿ.ಎಸ್ ಪದವಿ ಪೂರ್ವ ವಿಭಾಗ ನೂತನ ವಿದ್ಯಾರ್ಥಿ ಸರಕಾರ ರಚನೆ

0

ಕೆಪಿಎಸ್ ಬೆಳ್ಳಾರೆ ಪ.ಪೂ. ವಿಭಾಗದ 2024-25ನೇ ಸಾಲಿನ ವಿದ್ಯಾರ್ಥಿ ಸರಕಾರದ ಪ್ರಮಾಣವಚನ ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ನೆರವೇರಿತು. ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆಯನ್ನು ನಡೆಸಿ, ನೂತನ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿ ನಾಯಕರುಗಳನ್ನು ಆಯ್ಕೆ ಮಾಡಲಾಯಿತು.
ಕಾಲೇಜು ನಾಯಕನಾಗಿ ದ್ವಿತೀಯ ಕಲಾ ವಿಭಾಗದ ದೀಕ್ಷಿತ್ ಹಾಗೂ ಉಪನಾಯಕಿಯಾಗಿ ದ್ವಿತೀಯ ವಾಣಿಜ್ಯ ವಿಭಾಗದ ಸಹನಾ ಆಯ್ಕೆಯಾದರು.
ಇವರೊಂದಿಗೆ ವಿವಿಧ ಖಾತೆಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.
ಸಂಸ್ಥೆಯ ಉಪನ್ಯಾಸಕಿ ಶ್ರೀಮತಿ ಪ್ರಮೀಳಾರವರು ವಿದ್ಯಾರ್ಥಿ ಸರಕಾರ ರಚನೆ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರಾಂಶುಪಾಲರಾದ ಶ್ರೀ ಜನಾರ್ದನ ಕೆ.ಎನ್ ವಿದ್ಯಾರ್ಥಿ ನಾಯಕರುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ, ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಜವಾಬ್ದಾರಿ ಬಗ್ಗೆ ಮಾಹಿತಿಯನ್ನು ನೀಡಿದರು.
ಉಪನ್ಯಾಸಕಿಯಾಗಿ ಶ್ರೀಮತಿ ದೇವಿ ಕಲಾರವರು ಕಾರ್ಯಕ್ರಮ ನಿರ್ವಹಿಸಿದರು.