ಬೆಳೆವಿಮೆ ಪಾವತಿಗೆ ಮುಂದಿನ ವಾರ ಆದೇಶ : ಶಾಸಕಿ ಭಾಗೀರಥಿ ಮುರುಳ್ಯ ವಿಶ್ವಾಸ

0

ಬೆಳೆ ವಿಮೆ ಪರಿಹಾರಕ್ಕೆ ಸಂಬಂದಿಸಿ ಮುಂದಿನ ವಾರದಿಂದ ವಿಮೆ ಪಾವತಿಸಲು ಅವಕಾಶ ಕಲ್ಪಿಸಲು ಆದೇಶ ಆಗುತ್ತದೆ. ಇದಕ್ಕೆ ಸಂಬಂಧಿಸಿ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಲಾಗಿದ್ದು ಮುಂದಿನ ವಾರ ಈ ಪ್ರಕ್ರಿಯೆ ಜಾರಿಗೆ ಬರಲಿದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ.

ಸುಳ್ಯ ತಾಲೂಕು ಪಂಚಾಯತ್ ನಲ್ಲಿ ನಡೆದ ಗ್ರಾ.ಪಂ.ಗಳ ಅಧ್ಯಕ್ಷ, ಉಪಾಧ್ಯಕ್ಷ ರ ಸಭೆಯಲ್ಲಿ ಈ ವಿಷಯ ತಿಳಿಸಿದರು.

ಪಹಣಿ ಇರುವ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಈ ಕುರಿತು ಗ್ರಾಮ ವ್ಯಾಪ್ತಿಯಲ್ಲಿ ಅಧ್ಯಕ್ಷ – ಉಪಾಧ್ಯಕ್ಷರು ಮಾಹಿತಿ ನೀಡಿ ಎಂದು ಅವರು ಸಭೆಯಲ್ಲಿ ಹೇಳಿದರು.