ಡಾ. ಮುರಲಿಮೋಹನ್ ಚೂಂತಾರುರವರ ಸುರಕ್ಷಾದಲ್ಲಿ ಸಸಿ ವಿತರಣೆ

0

ಸುರಕ್ಷಾ ದಂತ ಚಿಕಿತ್ಸಾ ಲಯದಲ್ಲಿ ಚಿಕಿತ್ಸಾಲಯದ 27ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ದಿನಾಂಕ ಜು. 3ರಂದು ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ಜರುಗಿತು.

ಸುಮಾರು 50 ಮಂದಿಗೆ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು.

ವಿದ್ಯಾಧರ್ ಅವರಿಗೆ ನೆಲ್ಲಿಕಾಯಿ ಮತ್ತು ಹಲಸಿನಹಣ್ಣಿನ ಗಿಡವನ್ನು ಡಾ. ಮುರಲಿ ಮೋಹನ್ ಚೂಂತಾರುರವರು ನೀಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಡಾ. ರಾಜಶ್ರೀ ಮೋಹನ್, ದಂತ ಪರಿಚಾರಕಿಯರಾದ ರಮ್ಯಾ, ಚೈತ್ರಾ, ಸುಷ್ಮಿತಾ, ಜಯಶ್ರೀ ಮತ್ತಿತರರು ಉಪಸ್ಥಿತರಿದ್ದರು.

ಕಳೆದ ಹತ್ತು ವರುಷಗಳಿಂದ ಸುರಕ್ಷಾ ದಂತ ಚಿಕಿತ್ಸಾಲಯ ನಿರಂತರವಾಗಿ ಸಸಿ ವಿತರಣೆ ಮತ್ತು ವನಮಹೋತ್ಸವ ಕಾರ್ಯಕ್ರಮವನ್ನು ಜೂನ್ ಮತ್ತು ಜುಲೈ ತಿಂಗಳಿಡೀ ಆಚರಿಸುತ್ತಾ ಬರುತ್ತಿದೆ.