ಬೆಳ್ಳಾರೆ ಕೆಪಿಎಸ್ ವಸಂತ ಸಂಭ್ರಮ 2ನೇ ಪೂರ್ವಭಾವಿ ಸಭೆ

0

ಬೆಳ್ಳಾರೆ ಕೆಪಿಎಸ್ ನ ವಸಂತ ಸಂಭ್ರಮ ಕಾರ್ಯಕ್ರಮ ಮುಂದಿನ ಡಿಸೆಂಬರ್ ತಿಂಗಳಲ್ಲಿ ನಡೆಯಲಿದ್ದು, ಈ ಬಗ್ಗೆ 2ನೇ ಪೂರ್ವಭಾವಿ ಸಭೆ ಜು. 6ರಂದು ವಸಂತ ಸಂಭ್ರಮ ಆಚರಣಾ ಸಮಿತಿ ಸಂಚಾಲಕ ಎಸ್.ಎನ್. ಮನ್ಮಥರ ಅಧ್ಯಕ್ಷತೆಯಲ್ಲಿ ಸಂಸ್ಥೆಯ ಆಶ್ರಯದಲ್ಲಿ ನಡೆಯಿತು. ಎಸ್.ಡಿ.ಎಂ.ಸಿ. ಅಧ್ಯಕ್ಷ ಶ್ರೀನಾಥ್ ರೈ ಬಾಳಿಲ, ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷ ಶ್ರೀಮತಿ ನಮಿತಾ, ಉಪಪ್ರಾಂಶುಪಾಲೆ ಶ್ರೀಮತಿ ಉಮಾ ಕುಮಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ರೈ ಪನ್ನೆ ಸಮಿತಿಯ ಪದಾಧಿಕಾರಿಗಳ ರಚನೆಗೆ ಸಹಕರಿಸಿದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಮಾಯಿಲಪ್ಪ ಸ್ವಾಗತಿಸಿ, ಕಾಲೇಜಿನ ಪ್ರಾಂಶುಪಾಲರಾದ ಜನಾರ್ಧನ ಕೆ.ಎನ್‌ ವಂದಿಸಿದರು. ವಿವಿಧ ಸಮಿತಿಗಳಿಗೆ ಸಂಚಾಲಕರು, ಸದಸ್ಯರನ್ನು ಆಯ್ಕೆ ಮಾಡಲಾಯಿತು. ಶಾಲಾ ಹಳೆ ವಿದ್ಯಾರ್ಥಿಗಳು, ಊರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.