ಅರಂಬೂರು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಾಸಾಶನ ವಿತರಣೆ

0

ಸುಳ್ಯ ತಾಲೂಕಿನ ಸಂಪಾಜೆ ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಅರಂಬೂರು ಅಂಜಿಕಾರ್ ಎಂಬಲ್ಲಿ ಒಂಟಿ ಮಹಿಳೆ ಚೋಮಾರು ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ಮಾಸಾಶನ ಒಂದು ಸಾವಿರ ರೂಪಾಯಿಯನ್ನು ಒಕ್ಕೂಟದ ಅಧ್ಯಕ್ಷರಾದ ಚಂದ್ರಶೇಖರ್ ನೆಡ್ಚಿಲು ಅವರು ವಿತರಣೆ ಮಾಡಿದರು.

. ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕರಾದ ಗಂಗಾಧರವರು, ಉಪಾಧ್ಯಕ್ಷ ವಿಶ್ವನಾಥ ಆಚಾರ್ಯ, ಸೇವಾ ಪ್ರತಿನಿಧಿ ವಿಜಯಶ್ರೀ, ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.