ಜು. 14 : ಅಜ್ಜಾವರದಲ್ಲಿ “ಕಂಡದ ಗೌಜಿ ಕೆಸರ್ದ ಪರ್ಬ”

0

ಅಜ್ಜಾವರದ ಪ್ರತಾಪ ಯುವಕ ಮಂಡಲ ಮತ್ತು ಚೈತ್ರ ಯುವತಿ ಮಂಡಲ ಇದರ ವತಿಯಿಂದ 3ನೇ ವರ್ಷದ ಕಂಡದ ಗೌಜಿ ಕೆಸರ್ದ ಪರ್ಬ ಕಾರ್ಯಕ್ರಮ ಜು.14ರಂದು ಅಜ್ಜಾವರದ ಕೊರಂಗುಬೈಲು (ಬಾಲಕೃಷ್ಣ ಮಾಸ್ತರ್‌ರವರ ಗದ್ದೆಯಲ್ಲಿ) ಗದ್ದೆಯಲ್ಲಿ ನಡೆಯಲಿದೆ ಎಂದು ಪ್ರತಾಪ ಯುವಕ ಮಂಡಲದ ಅಧ್ಯಕ್ಷ ಗುರುರಾಜ್ ಅಜ್ಜಾವರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದ ಕ್ಯಾ.ಬ್ರಿಜೇಶ್ ಚೌಟ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕಿ ಭಾಗೀರಥಿ ಮುರುಳ್ಯ ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಣೆ ನಡೆಯುವುದು. ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ, ದಂಪತಿಗಳಿಗೆ, ಹಿರಿಯ ನಾಗರಿಕರಿಗೆ ವಿವಿಧ ಸ್ಪರ್ಧೆಗಳು ಕೆಸರು ಗದ್ದೆಯಲ್ಲಿ ನಡೆಸಲಾಗುವುದು.

ಮುಕ್ತ ವಾಲಿಬಾಲ್ ಪಂದ್ಯಾಟ

ಪುರುಷರ ಮುಕ್ತ ವಾಲಿಬಾಲ್ ಪಂದ್ಯಾಟ ನಡೆಯಲಿದ್ದು ಪ್ರಥಮ ರೂ.5555, ದ್ವಿತೀಯ ರೂ.3333 ಮತ್ತು ಟ್ರೋಫಿ ನೀಡಲಾಗುವುದು. ಎಲ್ಲರೂ ಈ ಕ್ರೀಡಾಕೂಟದಲ್ಲಿ ಭಾಗವಹಿಸುವಂತೆ ಅವರು ವಿನಂತಿಸಿಕೊಂಡರು.

ಪತ್ರಿಕಾಗೋಷ್ಠಿಯಲ್ಲಿ ಚೈತ್ರ ಯುತಿ ಮಂಡಲದ ಅಧ್ಯಕ್ಷೆ ಶಶ್ಮಿ ಭಟ್, ಪದಾಧಿಕಾರಿಗಳಾದ ವಿನುತಾ ಪಾತಿಕಲ್ಲು, ಚನಿಯ ಕಲ್ತಡ್ಕ
ನವೀನ್ ಕುಮಾರ್ , ಅಕ್ಷತ್ ಕುಮಾರ್ ಹಂಚಿನಮನೆ, ಲೋಕೇಶ್ ರಾವ್ ಉಪಸ್ಥಿತರಿದ್ದರು.