ಶಾಸಕ ಡಾ. ಭರತ್ ಶೆಟ್ಟಿ ಹೇಳಿಕೆ ಖಂಡನೀಯ : ರಂಜಿತ್ ರೈ ಮೇನಾಲ

0

ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯ ಸಂದರ್ಭ ಬಿಜೆಪಿ ಶಾಸಕರಾಗಿರುವ ಡಾ. ಭರತ್ ಶೆಟ್ಟಿಯವರು, ನಮ್ಮ ನಾಯಕರಾದ ರಾಹುಲ್ ಗಾಂಧಿಯವರ ಕುರಿತು ನೀಡಿದ ಹೇಳಿಕೆ ಖಂಡನೀಯ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾ ಸದಸ್ಯ ರಂಜಿತ್ ರೈ‌ ಮೇನಾಲ ಹೇಳಿದ್ದಾರೆ.

ಸಂಸತ್ತಿನೊಳಗೆ ಹೋಗಿ ರಾಹುಲ್ ಗಾಂಧಿ ಕೆನ್ನೆಗೆ ಬಾರಿಸುತೇನೆ ಎಂಬ ಹೇಳಿಕೆ ನೀಡಿದ್ದಾರೆ. ಜವಾಬ್ದಾರಿ ಇರುವ ಯಾರೇ ಆಗಲಿ ಈ ರೀತಿಯ ಹೇಳಿಕೆ ನೀಡುವುದಿಲ್ಲ.
ಶಾಸಕ ಭರತ್ ಶೆಟ್ಟಿ ಹೇಳಿಕೆ ಬಿಜೆಪಿ ಸಂಸ್ಕ್ರತಿ ಯನ್ನು ತೋರಿಸುತ್ತದೆ. ಅವರು ತಮ್ಮ‌ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.