ಕಂಡದ ಗೌಜಿ ಕೆಸರ್ದ ಪರ್ಬ ಕಾರ್ಯಕ್ರಮದ ಆಮಂತ್ರಣ ಸಂಸದರಿಗೆ ನೀಡಿ ಆಹ್ವಾನ

0


ಪ್ರತಾಪ ಯುವಕ ಮಂಡಲ (ರಿ) ಅಜ್ಜಾವರ, ಚೈತ್ರ ಯುವತಿ ಮಂಡಲ( ರಿ )ಅಜ್ಜಾವರ ವತಿಯಿಂದ ಜುಲೈ ೧೪ ರಂದು ಅಜ್ಜಾವರದ ಕೊರಂಗುಬೈಲು ಗದ್ದೆಯಲ್ಲಿ ನಡೆಯಲಿರುವ ೩ ನೇ ವರ್ಷದ ಕಂಡದ ಗೌಜಿ ಕೆಸರ್ದ ಪರ್ಬ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿರುವ ಸಂಸದ ಬ್ರಿಜೇಶ್ ಚೌಟರವರಿಗೆ ಇಂದು ಆಮಂತ್ರಣ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.


ಈ ಸಂದರ್ಭದಲ್ಲಿ ಚೈತ್ರ ಯುವತಿ ಮಂಡಲ ಅಧ್ಯಕ್ಷೆ ಶ್ರೀಮತಿ ಶಶ್ಮಿ ಭಟ್ ಅಜ್ಜಾವರ, ಕಾರ್ಯದರ್ಶಿ ಶ್ರೀಮತಿ ಮಾಲತಿಸೂರ್ಯ, ಯುವಕ ಮಂಡಲ ಅಧ್ಯಕ್ಷ ಗುರುರಾಜ್ ಅಜ್ಜಾವರ,ಗೌರವಸಲಹೆಗಾರಾದ ಸೂರ್ಯ ಕುಮಾರ್, ಹಾಗೂ ಅಕ್ಷತ್ ಕುಮಾರ್ ಹಂಚಿನಮನೆ, ರಮೇಶ್ ಮೇದಿನಡ್ಕ ಉಪಸ್ಥಿತರಿದ್ದರು.