ಅರಂತೋಡು: ಅರಮನೆಗಯದಲ್ಲಿ ಸೇತುವೆ ನಿರ್ಮಾಣಕ್ಕೆ ಸಂಸದರಿಗೆ ಮನವಿ ಸಲ್ಲಿಕೆ

0

ಆರಂತೋಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಅರಮನೆಗಯದಲ್ಲಿ ತೂಗುಸೇತುವೆಯು ಶಿಥಿಲಗೊಂಡಿದ್ದು, ಸದ್ಯ ಸಂಚಾರ ನಿರ್ಬಂಧಿಸಿರುವ ಕಾರಣ ಹೊಸ ಸೇತುವೆ ನಿರ್ಮಾಣಕ್ಕೆ ಸಂಸದ ಬ್ರಿಜೇಶ್ ಚೌಟ ಅವರಿಗೆ ಜು.10ರಂದು ಮನವಿ ಸಲ್ಲಿಸಲಾಯಿತು.

ಆರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಆರಂತೋಡು – ತೊಡಿಕಾನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಗ್ರಾ.ಪಂ. ಸದಸ್ಯ ವೆಂಕಟ್ರಮಣ ಪೆತ್ತಾಜೆ ಉಪಸ್ಥಿತರಿದ್ದರು.