ಪಂಜ: ಜಳಕದಹೊಳೆ ಸೇತುವೆ ನಿರ್ಮಾಣಕ್ಕೆ ಮನವಿ

0

ಪಂಜದ ಜಳಕದಹೊಳೆ ಸೇತುವೆ ಸಂಪೂರ್ಣ ಶಿಥಿಲ ಗೊಂಡಿದ್ದು ನೂತನ ಸೇತುವೆ ನಿರ್ಮಿಸುವಂತೆ ಪಂಜ ಗ್ರಾಮ ಪಂಚಾಯತ್ ಆಡಳಿತ ವತಿಯಿಂದ ಶಾಸಕಿ ಕು.ಭಾಗೀರಥಿ ಮುರುಳ್ಯ ರವರಿಗೆ ಮನವಿ ಸಲ್ಲಿಸಲಾಯಿತು.

ಜು.11 ರಂದು ಪಂಜ ಗ್ರಾಮ ಪಂಚಾಯತ್ ಗೆ ಶಾಸಕಿ ಕು.ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿದ್ದು ಈ ವೇಳೆ ಮನವಿ ನೀಡಲಾಗಿದೆ.

ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮೀ ಜಳಕದಹೊಳೆ, ಉಪಾಧ್ಯಕ್ಷ ನಾರಾಯಣ ಕೃಷ್ಣನಗರ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಂತ್ ಯು ಬಿ,ಸದಸ್ಯರಾದ ಶರತ್ ಕುದ್ವ, ಜಗದೀಶ್ ಪುರಿಯ,ಚಂದ್ರಶೇಖರ ದೇರಾಜೆ, ಶ್ರೀಮತಿ ಪ್ರಮೀಳಾ ಸಂಪ, ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಚಂದ್ರಶೇಖರ ಶಾಸ್ತ್ರಿ,ಲಿಗೋಧರ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.